ಕಲುಷಿತ ಐಸ್‍ಕ್ಯಾಂಡಿ ಪ್ರಕರಣ, ಕ್ರಮ ಕೈಗೊಳ್ಳಿ: ಹೆಪ್ಸಿಬಾ ರಾಣಿ ಕೊರ್ಲಪಾಟಿ

ಉಡುಪಿ, ಜುಲೈ 9: ಇತ್ತೀಚೆಗೆ ಜಿಲ್ಲೆಯಲ್ಲಿ ಕಲುಷಿತ ಐಸ್‍ಕ್ಯಾಂಡಿ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಸಂಬಂದಪಟ್ಟವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ ತಯಾರಿಸಿದ ಐಸ್‍ಕ್ಯಾಂಡಿ ಸೇವಿಸಿ ಸುಮಾರು 78 ಮಕ್ಕಳು ಅಸ್ವಸ್ಥಗೊಂಡಿದ್ದು, ಈ ಕುರಿತಂತೆ ಐಸ್‍ಕ್ಯಾಂಡಿ ತಯಾರಿಕರ […]

ತಂಬಾಕು ಕಂಪೆನಿಗಳೊಂದಿಗೆ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಬೇಡಿ: ಜಿಲ್ಲಾಧಿಕಾರಿ

ಉಡುಪಿ, ಜುಲೈ 9: ಸರಕಾರಿ ಇಲಾಖೆಗಳು, ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳುಗಳನ್ನು ಯಾವುದೇ ಇಲಾಖೆಗಳು ಪಡೆಯಬಾರದು, ಇದು ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮದ ಉಲ್ಲಂಘನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಉಡುಪಿ ಜಿಲ್ಲೆ ಇದರ ತ್ರೈಮಾಸಿಕ […]

ಉಡುಪಿ: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ; ಕುಟುಂಬ ‌ಸಮ್ಮಿಲನ‌

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮ ಶನಿವಾರ ನಗರದ ಪುರಭವನದಲ್ಲಿ ನಡೆಯಿತು. ಕಾರ್ಯಕ್ರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಿಂಡಿಕೇಟ್ ಬ್ಯಾಂಕ್ ಮಣಿಪಾಲದ ವಲಯ ಕಚೇರಿಯ ಪ್ರಧಾನ ವ್ಯವಸ್ಥಾಪಕ ಭಾಸ್ಕರ್ ಹಂದೆ ಮಾತನಾಡಿ, ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಸದಾ ಎಚ್ಚರಿಕೆಯಿಂದ ಮಾಡಿಕೊಂಡು ಬರುತ್ತಿದ್ದಾರೆ. ಇತ್ತೀಚೆಗೆ ಮಾದಕ ದ್ರವ್ಯ ಸೇವನೆ ವಿರುದ್ದ ಕೂಡ ದನಿ ಎತ್ತಿ […]

ಜಿಲ್ಲೆಯಲ್ಲಿ ಟ್ರಾನ್ಸ್ ಜೆಂಡರ್ಸ್‍ ನೊಂದಣಿ ಅಭಿಯಾನ: ಜಿಲ್ಲಾಧಿಕಾರಿ

ಉಡುಪಿ, ಜುಲೈ 6: ಉಡುಪಿ ಜಿಲ್ಲೆಯಲ್ಲಿರುವ ಟ್ರಾನ್ಸ್ ಜೆಂಡರ್ಸ್‍ಗಳಿಗೆ ಸರಕಾರದ ವಿವಿಧ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅವರ ನಿಖರ ಸಂಖ್ಯೆ ಇಲ್ಲದ ಕಾರಣ, ಜಿಲ್ಲೆಯಲ್ಲಿನ ಟ್ರಾನ್ಸ್ ಜೆಂಡರ್ಸ್‍ಗಳನ್ನು ನೊಂದಣಿ ಮಾಡಿ, ಅವರಿಗೆ ಗುರುತಿನ ಚೀಟಿ ವಿತರಿಸಲು ವಿಶೇಷ ನೊಂದಣಿ ಅಭಿಯಾನ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಶನಿವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಟ್ರಾನ್ಸ್ ಜೆಂಡರ್ಸ್ ಸಮನ್ವಯ ಸಮಿತಿ/ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ 282 ಮಂದಿ […]

ಗೋಹತ್ಯೆ ನಿಷೇಧ ಜಾರಿಗೆ ಪೇಜಾವರ ಶ್ರೀಗಳ ಆಗ್ರಹ

ಮಂಗಳೂರು: ಶುಕ್ರವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ ಗೋಹತ್ಯೆ ನಿಷೇಧ ಜಾರಿ ಮಾಡಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಆಗ್ರಹಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ದೇಶದಲ್ಲಿ‌ ಗೋಹತ್ಯೆ ನಿಷೇಧ ಅಗತ್ಯ ವಾಗಿದೆ ಎಂದರು. ಜತೆಗೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮೋದಿಯವರು ಕಾರ್ಯಕ್ರಮ ತರಬೇಕು. ಹಾಗೆಯೇ ಕೃಷಿ ಮತ್ತು ವೈದ್ಯಕೀಯಕ್ಕೆ ಬಜೆಟ್ ನಲ್ಲಿ ಹೆಚ್ಚು ಒತ್ತು ನೀಡಬೇಕೆಂದು ಶ್ರೀಗಳಿ ಮನವಿ ಮಾಡಿದರು.