ಇಂದು ರಾಷ್ಟ್ರೀಯ ವೈದ್ಯರ ದಿನ: ವೈದ್ಯರ ಸೇವೆಗೆ ಗೌರವ ಸಲ್ಲಿಸುವ ವಿಶೇಷ ದಿನವಿದು!

ಆರೋಗ್ಯವೇ ಮಹಾಭಾಗ್ಯ ಎಂಬ ಮಾತು ಎಲ್ಲ ಕಾಲಕ್ಕೂ ಅನ್ವಯಿಸುತ್ತದೆ. ಆರೋಗ್ಯವನ್ನು ಕಾಪಾಡುವುದು, ಅನಾರೋಗ್ಯಕ್ಕೆ ಚಿಕಿತ್ಸೆ ನೀಡಿ ರೋಗಿಯನ್ನು ಗುಣಪಡಿಸುವುದು ವೈದ್ಯರ ಪ್ರಮುಖ ಕರ್ತವ್ಯವಾಗಿದೆ. ಜೀವ ಉಳಿಸಿ ಹೊಸ ಬದುಕು ನೀಡುವ ವೈದ್ಯರನ್ನು “ವೈದ್ಯೋ ನಾರಾಯಣೋ ಹರಿ” ಎಂದು ಗೌರವಿಸುವ ಸಂಪ್ರದಾಯ ಭಾರತದಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ವೈದ್ಯರ ಈ ಅಮೂಲ್ಯ ಸೇವೆಯನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಪ್ರತಿವರ್ಷ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಮೊದಲ […]

ಪೆಟ್ರೋಲ್-ಡೀಸೆಲ್ ಮಾರಾಟಕ್ಕೆ ಇದ್ದ ಎಲ್ಲಾ ನಿರ್ಬಂಧ ರದ್ದು: ಕೇಂದ್ರ ಸರ್ಕಾರದ ಆದೇಶ

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿದ್ದ ಎಲ್ಲಾ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಜುಲೈ 1ರಿಂದ ಇಂಧನ ಮಾರಾಟವು ಎಂದಿನಂತೆ ಯಾವುದೇ ನಿರ್ಬಂಧವಿಲ್ಲದೆ ನಡೆಯಲಿದೆ. ಈ ಕುರಿತು ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದ್ದು, ಪ್ರತಿ ವ್ಯಕ್ತಿಗೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಮಾರಾಟ ಮಾಡಬೇಕೆಂಬ ನಿಯಮ ಸೇರಿದಂತೆ ಜೂನ್ 11ರಂದು ಜಾರಿಗೊಳಿಸಿದ್ದ ಎಲ್ಲಾ ನಿರ್ಬಂಧಗಳು ಜುಲೈ 1ರಿಂದ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ದೇಶದ ಇಂಧನ ಪೂರೈಕೆ ಮತ್ತು ವಿತರಣಾ ವ್ಯವಸ್ಥೆಯ ಸ್ಥಿತಿಗತಿಗಳನ್ನು […]

ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

ಮಂಗಳೂರು:  2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು /ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ/ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ ಮೂಡಬಿದಿರೆ, ಇಲ್ಲಿಯ ಪದವಿ ಕಾರ್ಯಕ್ರಮದ ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಎಕೊನಾಮಿಕ್ಸ್, ರಾಜ್ಯಶಾಸ್ತ್ರ, ಜಿಯೋಗ್ರಾಫಿ, ಕೆಮಿಸ್ಟ್ರಿ, ಗಣಿತ, ಮೈಕ್ರೊಬಯೋಲಜಿ,  ಕಂಪ್ಯೂಟರ್ ಸೈನ್ಸ್/ಬಿ.ಸಿ.ಎ,  ಬಾಟನಿ, ಪ್ರಾಣಿಶಾಸ್ತ್ರ,  ಕಾಮರ್ಸ್  ಆ್ಯಂಡ್ ಮ್ಯಾನೇಜ್‍ಮೆಂಟ್, ದೈಹಿಕ ಶಿಕ್ಷಣ, ಪತ್ರಿಕೋದ್ಯಮ, ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್‍ಮೆಂಟ್ ವಿಷಯಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ […]

ಗೌಡ ಸಾರಸ್ವತ ಸಮಾಜದ ವಧು-ವರರ ಅನ್ವೇಷಣೆ ಆಹ್ವಾನ

ಉಡುಪಿ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಧು-ವರರ ಅನ್ವೇಷಣೆಗೆ ಆಹ್ವಾನಿಸಲಾಗಿದೆ ಎಂದು ದಾವಣಗೆರೆಯ ಗೌಡ ಸಾರಸ್ವತ ಸಮಾಜದ ನಿಕಟಪೂರ್ವ ಅಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. 2026ರ ಆಗಸ್ಟ್ 23 ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಾಯ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಕಿಲ್ಪಾಡಿಯಲ್ಲಿ ಸಮಾಜದ ವಧು-ವರರ ಅನ್ವೇಷಣೆ ಸಂಬಂಧ ವೈವಾಹಿಕ ಸಮಾವೇಶ ನಡೆಯಲಿದೆ. ಹೆಸರು ನೊಂದಾಯಿಸುವ ಕೊನೆಯ ದಿನಾಂಖ 01-08-2026 ಅಂದು ಉಪಹಾರ, ಭೋಜನದ ವ್ಯವಸ್ಥೆ ಇರುತ್ತದೆ.  […]

ಕಾರ್ಕಳ ತಾಲೂಕು ಆಸ್ಪತ್ರೆಗೆ ಹೊಸ ಪ್ರಸೂತಿ ತಜ್ಞರ ನೇಮಕ

ಕಾರ್ಕಳ: ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾಗಿ ಗುತ್ತಿಗೆ ಆಧಾರದ ಮೇಲೆ ಡಾ. ಸಾಹಿತಿರಮ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ವೈದ್ಯಾಧಿಕಾರಿ ಡಾ. ಸಂದೀಪ್ ಕುಡ್ವ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ಸುಮಾರು 50 ಗ್ರಾಮಗಳ ಮಹಿಳೆಯರು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ಆಗಮಿಸುತ್ತಿದ್ದು, ಕಳೆದ ಮೂರು ವರ್ಷಗಳ ಹಿಂದೆ ಇಲ್ಲಿ ಕಾರ್ಯನಿರ್ವಹಿಸಿದ್ದ ಹೆರಿಗೆ ತಜ್ಞ ಡಾ. ಗಣೇಶ್ ಭಟ್ ಅವರ ಅವಧಿಯಲ್ಲಿ ತಿಂಗಳಿಗೆ ಸರಾಸರಿ 100 ರಿಂದ 150 ಹೆರಿಗೆಗಳು ದಾಖಲಾಗುತ್ತಿದ್ದರು. ಕಾರ್ಕಳ ಮಾತ್ರವಲ್ಲದೆ […]