ದಾಂಪತ್ಯ ಜೀವನಕ್ಕೆ ಕಾಲಿಟ್ಟ “ಸು ಫ್ರಂ ಸೋ” ಖ್ಯಾತಿಯ ಜೆಪಿ ತುಮ್ಮಿನಾಡು

ಮಂಗಳೂರು: ತುಳು ಚಿತ್ರರಂಗದ ಖ್ಯಾತ ಕಲಾವಿದ, ಹಾಗೇ ಇತ್ತೀಚೆಗೆ ಫುಲ್ ಹಿಟ್ ಆದ ರಾಜ್ ಬಿ ಶೆಟ್ಟಿ ನಿರ್ಮಾಣದ “ಸು ಫ್ರಂ ಸೋ” ಚಿತ್ರದ ನಟ, ನಿರ್ದೇಶಕ ಜೆಪಿ ತುಮ್ಮಿನಾಡು ಅವರು ತಮ್ಮ ದೀರ್ಘಕಾಲದ ಗೆಳತಿ ರಶ್ಮಿಕಾ ಜೊತೆ ಮೇ 6ರಂದು ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದಲ್ಲಿ ಪ್ರಕಾಶ್ ತುಮ್ಮಿನಾಡು ಸೇರಿದಂತೆ ಕುಟುಂಬ ಸದಸ್ಯರು, ಆಪ್ತರು ಮತ್ತು ಸ್ನೇಹಿತರು ಭಾಗವಹಿಸಿದ್ದರು. ಕಳೆದ ಎರಡು ದಿನಗಳಿಂದ ಮದುವೆ ಶಾಸ್ತ್ರಗಳು ನಡೆದಿದ್ದು, ಮಾಂಗಲ್ಯಧಾರಣೆಯ ಫೋಟೋಗಳು ಮತ್ತು ವಿಡಿಯೋಗಳು […]
ವೆನ್ ಲಾಕ್ ಆಸ್ಪತ್ರೆಯಲ್ಲಿ ಶಾಖಾಘಾತ ಚಿಕಿತ್ಸೆಗೆ ವಿಶೇಷ 10 ಹಾಸಿಗೆಗಳ ಘಟಕ

ಮಂಗಳೂರು: ಕರಾವಳಿಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ಪರಿಣಾಮವಾಗಿ ಶಾಖಾಘಾತ (Heat Stroke) ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಸಿದ್ಧತೆ ಕೈಗೊಳ್ಳಲಾಗಿದೆ. ಆಸ್ಪತ್ರೆಯ ಹೊಸ ಶಸ್ತ್ರಚಿಕಿತ್ಸಾ ಬ್ಲಾಕ್ನ 5ನೇ ಮಹಡಿಯಲ್ಲಿ ಶಾಖಾಘಾತ ರೋಗಿಗಳ ಚಿಕಿತ್ಸೆಗೆ 10 ಹಾಸಿಗೆಗಳ ವಿಶೇಷ ಘಟಕವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆ ಅಧೀಕ್ಷಕರು ತಿಳಿಸಿದ್ದಾರೆ. ಶಾಖಾಘಾತ ಎಂದರೇನು? ಶಾಖಾಘಾತವು ಜೀವಕ್ಕೆ ಅಪಾಯಕಾರಿ ವೈದ್ಯಕೀಯ ತುರ್ತುಸ್ಥಿತಿಯಾಗಿದೆ. ದೇಹದ ಉಷ್ಣತೆ 104°F (40°C) ಅಥವಾ ಅದಕ್ಕಿಂತ ಹೆಚ್ಚು ಏರಿದಾಗ ದೇಹದ ತಾಪಮಾನ ನಿಯಂತ್ರಣ ವ್ಯವಸ್ಥೆ ವಿಫಲವಾಗುತ್ತದೆ. ತಕ್ಷಣ […]
ಮುಂಗಾರು ಮಳೆಗೆ ಮಂಗಳೂರು ರೆಡಿ; ಎಲ್ಲಾ ತುರ್ತು ಸೇವೆಗಳನ್ನು ನಿಭಾಯಿಸಲು ಸಿದ್ದವಾದ ಜಿಲ್ಲಾಡಳಿತ

ಮಂಗಳೂರು: ಮುಂಗಾರು ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ, ಭಾರೀ ಮಳೆಯಿಂದ ಸಂಭವಿಸಬಹುದಾದ ಹಾನಿಯನ್ನು ತಡೆಯಲು ಮಂಗಳೂರು ಜಿಲ್ಲಾಡಳಿತ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ. ಈ ಬಾರಿ ವಿಕೇಂದ್ರೀಕೃತ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಯೊಂದು ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಇನ್ಸಿಡೆಂಟ್ ಕಮಾಂಡರ್ಗಳನ್ನು ನೇಮಕ ಮಾಡಲಾಗಿದೆ. ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ರೂ. 30,000 ಅನುದಾನವನ್ನು ಮೀಸಲಿಡಲಾಗಿದೆ. ಭೂಕುಸಿತ, ಮನೆಗಳಿಗೆ ನೀರು ನುಗ್ಗುವುದು, ಮರಗಳು […]
ಮಂಗಳೂರು: ಟೈಮಿಂಗ್ ವಿವಾದ – ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಹೊಡೆದಾಟ

ಮಂಗಳೂರು: ಬಜಪೆ ಬಸ್ ನಿಲ್ದಾಣದಲ್ಲಿ ಬಸ್ ಟೈಮಿಂಗ್ ವಿಚಾರವಾಗಿ ಖಾಸಗಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ವರದಿಯಾಗಿದೆ. ಖಾಸಗಿ ಬಸ್ಸಿನ ಚಾಲಕ ಶ್ರೀನಿವಾಸ ಹಾಗೂ ಮತ್ತೊಂದು ಬಸ್ಸಿನ ನಿರ್ವಾಹಕ ಸಂತೋಷ್ ಶೆಟ್ಟಿ ನಡುವೆ ಈ ಗಲಾಟೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗಲೇ, ಪೊಲೀಸರ ಸಮ್ಮುಖದಲ್ಲೇ ಇಬ್ಬರೂ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, […]
ರಾಷ್ಟ್ರೀಯ ಗುಣಮಟ್ಟ ಸಮಾವೇಶ: ಮಂಗಳೂರು ವಿಮಾನ ನಿಲ್ದಾಣಕ್ಕೆ ಮೂರು ಚಿನ್ನದ ಪ್ರಶಸ್ತಿಯ ಗರಿ

ಮಂಗಳೂರು: ರಾಷ್ಟ್ರೀಯ ಗುಣಮಟ್ಟ ಸಮಾವೇಶದಲ್ಲಿ Mangalore International Airport ಮೂರು ಚಿನ್ನದ ಪ್ರಶಸ್ತಿಗಳನ್ನು ಗೆದ್ದು ಗಮನ ಸೆಳೆದಿದೆ. ವಿಮಾನ ನಿಲ್ದಾಣದ ತಂಡಗಳು Poka-Yoke ಪರಿಕಲ್ಪನೆಯ ಆಧಾರದ ಮೇಲೆ ನವೀನ ಮತ್ತು ಸುರಕ್ಷತಾ ಪರಿಹಾರಗಳನ್ನು ಪ್ರದರ್ಶಿಸಿ ಈ ಸಾಧನೆ ಮಾಡಿವೆ. ಮಂಗಳೂರು ಅಪ್ಡೇಟರ್ ಸರ್ವಿಸಸ್ ಲಿಮಿಟೆಡ್ ಸಹಯೋಗದಲ್ಲಿ ನಡೆದ ಈ ಸಮಾವೇಶದಲ್ಲಿ, ಸಜಿತ್ ಇ.ವಿ. ಮತ್ತು ವಿಜಯಲಕ್ಷ್ಮಿ ನೇತೃತ್ವದ ತಂಡವು ಹೈ-ಮಾಸ್ಟ್ ನಿರ್ವಹಣೆಗೆ ರಿಮೋಟ್-ಕಂಟ್ರೋಲ್ ಅಪಾಯ ತಡೆ ಸಾಧನವನ್ನು ಅಭಿವೃದ್ಧಿಪಡಿಸಿ ಚಿನ್ನದ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದೇ ವೇಳೆ ಕಿರಣ್ […]