ಸಾಂಸ್ಕೃತಿಕ-ಕಲಾ ಚಟುವಟಿಕೆ ಹೃದಯ ಬೆಸೆಯುವ‌ ಮಾಧ್ಯಮ: ಅಂಬಾತನಯ ಮುದ್ರಾಡಿ

ಉಡುಪಿ: ಸಾಂಸ್ಕೃತಿಕ ಕಲಾ ಚಟುವಟಿಕೆಗಳು ಹೃದಯ ಬೆಸೆಯುವ ಮಾಧ್ಯಮವಾಗಿದ್ದು, ಇದರ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಹೇಳಿದರು. ಉಡುಪಿ ಸಂಸ್ಕೃತಿ ವಿಶ್ವಪ್ರತಿಷ್ಠಾನದ ವತಿಯಿಂದ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ ಸಂಸ್ಕೃತಿ ಪ್ರತಿಷ್ಠಾನದ ಉದ್ಘಾಟನೆ, ನಾಟಕೋತ್ಸವ, ಸಾಕ್ಷ್ಯ ಚಿತ್ರ ಬಿಡುಗಡೆ ಹಾಗೂ ಯುವ ಪ್ರತಿಭೆಗಳ ಭಾವಾಭಿವ್ಯಕ್ತಿ ಕಾರ್ಯಕ್ರಮದಲ್ಲಿ ‘ಉಡುಪಿ ವಿಶ್ವನಾಥ ಶೆಣೈ’ ಅವರ ಜೀವನ ಚರಿತ್ರೆ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ […]

ಕಡ್ಡಾಯ ವರ್ಗಾವಣೆ ಬದಲಾವಣೆಗೆ ಸರಕಾರ ಬದ್ಧ: ಕೋಟ

ಉಡುಪಿ: ಶಿಕ್ಷಕರು ವಿವಿಧ ರೀತಿಯ ಒತ್ತಡದಿಂದ ಕೆಲಸ ಮಾಡುವ ಬದಲು ನಿರಾಳತೆ ಹಾಗೂ ಪ್ರೀತಿಯಿಂದ ಕೆಲಸ ಮಾಡುವ ವಾತಾವರಣ ಸೃಷ್ಟಿಸುವ ಅಗತ್ಯವಿದೆ. ಹೀಗಾಗಿ ಸರ್ಕಾರ ಆದಷ್ಟು ಬೇಗ ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆ ತಂದು ಶಿಕ್ಷಕರಿಗೆ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಬದ್ಧವಾಗಿದೆ ಎಂದು ಮುಜುರಾಯಿ, ಮೀನುಗಾರಿಕಾ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ಆದರ್ಶ ಆಸ್ಪತ್ರೆ ವತಿಯಿಂದ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶಿಕ್ಷಕ ದಿನಾಚರಣೆಯ ಅಂಗವಾಗಿ ಆದರ್ಶ […]

ಕರ್ನಾಟಕ‌ ರಾಜ್ಯ ವಿಶೇಷ ಶಿಕ್ಷಕ ಶಿಕ್ಷಕೇತರ ಸಂಘದ ಪದಗ್ರಹಣ

ಬೆಂಗಳೂರು: ಕರ್ನಾಟಕ‌ ರಾಜ್ಯ ವಿಶೇಷ ಶಿಕ್ಷಕ ಶಿಕ್ಷಕೇತರ ಸಂಘದ ಪದಗ್ರಹಣ ಕಾರ್ಯಕ್ರಮ ಬೆಂಗಳೂರಿನ ಕೆ.ಎ.ಎಸ್ ಆಫೀಸರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಶನಿವಾರ ನೆರವೇರಿತು. ವಾರ್ತಾ ಮತ್ತು ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ವಿಕಲಚೇತನ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಎಚ್.ವಿ. ಗೋಪಾಲಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಕಲಚೇತನರ ಸಬಲೀಕರಣ ಇಲಾಖೆಯ ನಿರ್ದೇಶಕ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು. ನೂತನವಾಗಿ ರಾಜ್ಯ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು. ಪ್ರಧಾನ ಕಾರ್ಯದರ್ಶಿ ಡಾ. […]

ಉಡುಪಿ: ಮಂಗಳೂರು ವಿವಿ ಅಂತರ್ ಕಾಲೇಜು ಬ್ಯಾಡ್ಮಿಂಟನ್ ಗೆ ಚಾಲನೆ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಅಜ್ಜರಕಾಡು ಡಾ. ಜಿ. ಶಂಕರ್‌ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬ್ಯಾಂಕ್‌ ಆಫ್‌ ಬರೋಡಾ, ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ ಅಜ್ಜರಕಾಡು ಒಳಂಗಾಣ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ ಮಂಗಳೂರು ವಿವಿ ಅಂತರ ಕಾಲೇಜು ಮಟ್ಟದ ಪುರುಷ ಹಾಗೂ ಮಹಿಳೆಯರ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ಬುಧವಾರ ಉದ್ಘಾಟನೆಗೊಂಡಿತು. ಬ್ಯಾಂಕ್‌ ಆಫ್‌ ಬರೋಡಾದ ಉಡುಪಿ ಪ್ರಾದೇಶಿಕ ಪ್ರಬಂಧಕ ರವೀಂದ್ರ ರೈ ಚಾಲನೆ ನೀಡಿ ಮಾತನಾಡಿ, […]

ಸಮರ್ಪಣಾಭಾವದಿಂದ ನೀಡಿದ ಪ್ರಶಸ್ತಿಗೆ ವಿಶೇಷ‌ ಮಹತ್ವವಿದೆ: ವಿದ್ಯಾಸಾಗರ ಸ್ವಾಮೀಜಿ

ಉಡುಪಿ: ಶಿಫಾರಸ್ಸು ಅಥವಾ ಒತ್ತಡ ತಂದು ಪಡೆಯುವ ಪ್ರಶಸ್ತಿಗಿಂತಲೂ ಸಮರ್ಪಣಾ ಭಾವದಿಂದ ನೀಡುವ ಪ್ರಶಸ್ತಿಗೆ ವಿಶೇಷ ಮಹತ್ವವಿದೆ ಎಂದು ಕೃಷ್ಣಾಪುರ ಮಠದ ವಿದ್ಯಾಸಾಗರ ಸ್ವಾಮೀಜಿ ಹೇಳಿದರು. ಉಡುಪಿ ರಥಬೀದಿ ಶ್ರೀ ರಾಘವೇಂದ್ರ ಮಠದ ಮಂತ್ರಾಲಯ ಸಭಾಭಾವನದಲ್ಲಿ ನಡೆದ ರಾಜ್ಯಮಟ್ಟದ ‘ಉಪಾಧ್ಯಾಯ ಸಮ್ಮಾನ್‌’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಶಸ್ತಿ ಕೊಟ್ಟವರಿಗೂ ಪಡೆದವರಿಗೂ ಸಮಾಜದಲ್ಲಿ ನಿಜವಾದ ಗೌರವ ಸಿಗುತ್ತದೆ. ಆ ದೃಷ್ಟಿಯಿಂದ ನೋಡುವಾಗ ಉಪಾಧ್ಯಾಯ ಮೂಡುಬೆಳ್ಳೆ ಕಲಾ ಪ್ರತಿಷ್ಠಾನ ನೀಡುವ ಪ್ರಶಸ್ತಿ ನಿಜವಾಗಲೂ ಶ್ರೇಷ್ಠವಾಗಿದೆ ಎಂದರು. ರಾಜ್ಯ […]