ನಿನ್ನೆ ಮೊನ್ನೆ ನಮ್ಮೊಂದಿಗೆ ಹರಟೆ ಹೊಡೆಯುತ್ತಿದ್ದವರು ಈಗಿಲ್ಲ ಅಂದರೆ ನಂಬೋದು ಹೇಗೆ?:ಶ್ರದ್ದಾ ಬರೆದ ಬರಹ

ಜೀವನ ಎಷ್ಟೊಂದು ವಿಚಿತ್ರ ಅಲ್ವಾ? ನಿನ್ನೆ ಮೊನ್ನೆ ಎಲ್ಲಾ ಹಕ್ಕಿಯಂತೆ ಹಾಯಾಗಿ ಹಾರಾಡುತ್ತ ಇದ್ದ ನಾವು ಈಗ ಪಂಜರದ ಹಕ್ಕಿಯಂತೆ ಬಂಧಿಯಾಗಿದ್ದೇವೆ. ಬೆನ್ನು ಹಿಡಿದ ಬೇತಾಳನಂತೆ ಈ ರೋಗ  ನಮ್ಮನ್ನು ಹಿಂಬಾಲಿಸುತ್ತಿದೆ. ಇತ್ತೀಚೆಗೆ ಮಳೆಗಾಲದ ಹೊತ್ತಿನಲ್ಲಿ ಬರುವ ಶೀತ ಜ್ವರಗಳಿಗೂ ಕರೋನಾ ಎನ್ನುವಂತಾಗಿದೆ. ಜನರು ಈ ವೈರಸ್ ಗೆ ಎಷ್ಟು ಬೆಂದು ಹೋಗಿದ್ದಾರೆ ಎಂದರೆ ಸಾಮಾನ್ಯ ಜ್ವರಕ್ಕೂ ಮದ್ದು ತರಲು ಹೋಗಲು ಹಿಂದೆ ಮುಂದೆ ನೋಡುತ್ತಾರೆ. ಇತ್ತೀಚೆಗೆ ಹಳ್ಳಿ ಪ್ರದೇಶದ ಬಡಕುಟುಂಬಗಳಿಗೆ ಕೊರೋನಾ ವೈರಸ್ ಗೆ ತುತ್ತಾಗುತ್ತಿದ್ದಾರೆ. […]

ಲಾಕ್ ಡೌನ್ ಮುಂದುವರಿಕೆ ಅನಿವಾರ್ಯವಾಗಲಿದೆ:ಮುರುಗೇಶ್ ನಿರಾಣಿ

ಕಲಬುರಗಿ:ಲಾಕ್ ಡೌನ್ ಮುಂದುವರಿಕೆ ಅನಿವಾರ್ಯವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈಗಾಗಲೇ ಮೇ 24ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದು ಈ ನಡುವೆ ಕೋವಿಡ್ ತಡೆಗಾಗಿ ಲಾಕ್ ಡೌನ್ ವಿಸ್ತರಣೆ ಮಾಡಿದರೇ ಒಳ್ಳೆಯದು ಎಂದವರು ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಕೊರೋನಾ ತಡೆಗೆ 10 ದಿನಗಳ ಕಾಲ ಲಾಕ್ ಡೌನ್ ಮಾಡಿದರೇ ಉತ್ತಮ. ಈ ಬಗ್ಗೆ ಸಿಎಂಗೆ ತಿಳಿಸಿದ್ದೇವೆ. ಆದರೆ ಸರ್ಕಾರ ಕೈಗೊಳ್ಳುವ ನಿರ್ಧಾರ […]

ನಮ್ಮ ದೇಶದಲ್ಲಿ ಕೊರೋನಾ ಸೋಂಕೇ ಇಲ್ಲ ಎಂದು ವಿಶ್ವ ಸಂಸ್ಥೆಗೆ ಹೇಳಿದ ದೇಶ ಯಾವುದು?

ಪ್ಯೋಂಗ್ಯಾಂಗ್: ನಮ್ಮ ದೇಶದಲ್ಲಿ ಇಂದಿಗೂ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಒಂದು ದೇಶ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.ಅಬ್ಬಾ ಇದೇನಪ್ಪಾ ಜಗತ್ತೇ ಕೊರೋನಾದಿಂದ ತತ್ತರಿಸುತ್ತಿದ್ದರೆ ಅದ್ಯಾವ ದೇಶದಲ್ಲಿ ಕೋರೋನಾನೇ ಇಲ್ವಂತೆ ಅಂತ ಅಚ್ಚರಿ ಪಡ್ತಿದ್ದೀರಾ. ಹೌದಂತೆ. ಕಿಮ್ ಜಾಂಗ್ ಉನ್ ಆಡಳಿತವಿರುವ ಉತ್ತರ ಕೊರಿಯಾದಲ್ಲಿ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲವಂತೆ. ಈ ಬಗ್ಗೆ ಉತ್ತರ ಕೊರಿಯಾ ಸರ್ಕಾರವೇ ವಿಶ್ವ ಆರೋಗ್ಯ ಸಂಸ್ಥೆಗೆ ಮಾಹಿತಿ ನೀಡಿದ್ದು ಎಲ್ಲೆಡೆ ಅಚ್ಚರಿ ವ್ಯಕ್ತವಾಗಿದೆ. ಏಪ್ರಿಲ್ ನಿಂದ ಈ […]

ಕೆಮ್ಮು-ಕಫ, ಜೀರ್ಣಶಕ್ತಿ ಸಮಸ್ಯೆ ಇದ್ಯಾ? ಹಾಗಿದ್ರೆ ಈ ಕಷಾಯ ಕುಡೀರಿ ಎಲ್ಲಾ ಓಡೋಗುತ್ತೆ!

«ಸಿಂಥಿಯಾ ಮೆಲ್ವಿನ್  ಭಾರತೀಯ ಸಂಪ್ರದಾಯದಲ್ಲಿ ವೀಳ್ಯದೆಲೆಗೆ ಹೆಚ್ಚಿನ ಮಹತ್ವವಿದೆ. ವೀಳ್ಯದೆಲೆ ಭಾರತೀಯ, ಅದರಲ್ಲೂ ಕರಾವಳಿ ಕರ್ನಾಟಕದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಎಲ್ಲಾ ಶುಭಕಾರ್ಯಗಳಿಗೂ ವೀಳ್ಯದೆಲೆ ಬೇಕೇ ಬೇಕು. ವೀಳ್ಯದ ಜೊತೆ ಅಡಿಕೆ ಮತ್ತು ಸುಣ್ಣವನ್ನು ಸೇರಿಸಿ ತಿನ್ನುವುದನ್ನು ನೋಡಿದ್ದೇನೆ. ಆದರೆ ವೀಳ್ಯದೆಲೆಯ ಕಷಾಯವನ್ನು ಮಾಡಬಹುದು ಎನ್ನುವುದು ಕೇಳಿದ್ದೀರಾ? ಹೌದು. ವೀಳ್ಯದೆಲೆಯ ಕಷಾಯವನ್ನು ಮಾಡಿ ಕುಡಿಯುವುದರಿಂದ ನಮ್ಮ ಆರೋಗ್ಯಕ್ಕೆ ತುಂಬಾ ಲಾಭಗಳಿದೆ. ಕಷಾಯ ಮಾಡುವ ರೀತಿ: ಒಂದು ಲೋಟ ಕುದಿಯುತ್ತಿರುವ ನೀರಿಗೆ ಒಂದು ವೀಳ್ಯದೆಲೆಯನ್ನು ಚೂರು-ಚೂರು ಮಾಡಿ ಹಾಕಿ […]

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಬಲಾತ್ಕಾರ, ಖಂಡನೀಯ: ಶೋಭಾ ಕರಂದ್ಲಾಜೆ

ಉಡುಪಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರ, ಅತ್ಯಾಚಾರ ಅತ್ಯಂತ ಖಂಡನೀಯವಾದುದು. ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ಕೊಡವಂತೆ ಸೂಚಿಸಿರುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣದಲ್ಲಿಯೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿರುತ್ತಾರೆ. ಬಾಲಕಿಯನ್ನು ಕರೆತಂದು ದುರುಪಯೋಗ ಮಾಡಿದ ಅವಳ ಚಿಕ್ಕಮ್ಮ ಎಂದು ಕರೆಯಲ್ಪಡುವ ಗೀತಳನ್ನು ಕೂಡ ಬಂಧಿಸಿ ವಿಚಾರಿಸಲಾಗುತ್ತಿದೆ. SSLC ಓದುವ […]