ಸಚಿವನಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದೇನೆ: ಖಾದರ್

ಮಂಗಳೂರು: ವಿಶ್ವಾಸ ಮತಯಾಚನೆಯಲ್ಲಿ ನಮಗೆ ಸೋಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇನೆ. ಸಚಿವನಾಗಿ ಉತ್ತಮ ಕಾರ್ಯ ಮಾಡಿದ್ದೇನೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶೇಷ ಅನುದಾನವನ್ನು ಜಿಲ್ಲೆಗೆ ತಂದಿದ್ದೇನೆ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಒಂದೊಂದು ಕ್ಷೇತ್ರಕ್ಕೆ ೬ ಕೋಟಿ ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿ, ಲೈವ್ ಬ್ಯಾಂಡ್, ಇಸ್ವಿಟ್ ಇವುಗಳನ್ನು ಬಂದ್ ಮಾಡಿಸಿದ್ದೇನೆ. ಕಳೆದ ಒಂದು ವರ್ಷದಿಂದ ಮರಳು ಮಾಫಿಯಾದ ವಿರುದ್ಧ ಕ್ರಮಕೈಗೊಂಡಿದ್ದೇನೆ. […]
ಮಂಗಳೂರು: ವಿಮಾನ ರನ್ ವೇಯಿಂದ ಜಾರಿದ ಪ್ರಕರಣ; ಪೈಲೆಟ್ ಲೈಸೆನ್ಸ್ ರದ್ದು

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ನಡೆದಿದ್ದ ವಿಮಾನ ರನ್ ವೇಯಿಂದ ಜಾರಿದ ಪ್ರಕರಣ ಘಟನೆಗೆ ಸಂಬಂಧಿಸಿದಂತೆ ಏರ್ ಇಂಡಿಯಾ ವಿಮಾನದ ಪೈಲಟ್ ಕ್ಯಾಪ್ಟನ್ ಪ್ರವೀಣ್ ಲೈಸೆನ್ಸ್ ರದ್ದುಗೊಂಡಿದೆ. ಕಳೆದ ಕೆಲ ದಿನಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ರನ್ ವೇಯಿಂದ ವಿಮಾನ ಜಾರಿತ್ತು. ಹೀಗಾಗಿ ಲೈಸನ್ಸ್ ರದ್ದು ಮಾಡುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಆದೇಶ ನೀಡಿದೆ. ನಿರ್ಲಕ್ಷ ಎಸಗಿದ ಹಿನ್ನೆಲೆಯಲ್ಲಿ ವಿಮಾನದ ಪೈಲೆಟ್ ಲೈಸೆನ್ಸ್ ರದ್ದಾಗಿದೆ. ಘಟನೆಯ ಹಿನ್ನೆಲೆ: ಜೂನ್ 30ರಂದು ಸಂಜೆ ದುಬೈಯಿಂದ […]
ಉಡುಪಿ: ಅಗಲಿದ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ಶೃದ್ಧಾಂಜಲಿ

ಉಡುಪಿ: ಡೆಂಗ್ಯು ಜ್ವರದಿಂದ ಭಾನುವಾರ ರಾತ್ರಿ ಮೃತರಾದ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ಉಡುಪಿ ಪತ್ರಕರ್ತರ ಸಂಘ, ಪ್ರೆಸ್ಕ್ಲಬ್ ವತಿಯಿಂದ ಬುಧವಾರ ಪ್ರೆಸ್ಕ್ಲಬ್ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪತ್ರಕರ್ತ ಶಶಿಧರ್ ಮಾಸ್ತಿಬೈಲು ಮಾತನಾಡಿ, ಪತ್ರಕರ್ತರು ತಮ್ಮ ಕೆಲಸದ ಜತೆಗೆ ಆರೋಗ್ಯದ ಬಗ್ಗೆಯು ಹೆಚ್ಚಿನ ಕಾಳಜಿ ವಹಿಸಬೇಕು. ಲವಲವಿಕೆಯ ವ್ಯಕ್ತಿತ್ವ, ಉತ್ತಮ ವಿಡಿಯೋ ಜರ್ನಲಿಸ್ಟ್ ಆಗಿದ್ದ ನಾಗೇಶ್ ಪಡು ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಆಶಿಸಿದರು. ನಾಗೇಶ್ ಅವರ ಭಾವಚಿತ್ರಕ್ಕೆ ಪತ್ರಕರ್ತರು ಪುಷ್ಪ ನಮನ ಸಲ್ಲಿಸಿ […]
ಮಂಗಳೂರು: ಮೀನುಗಾರಿಕಾ ಬಂದರು ಅಭಿವೃದ್ಧಿಗೆ 50 ಲಕ್ಷ ಅನುದಾನ
ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ಅವರ ನಿರಂತರ ಪ್ರಯತ್ನದಿಂದ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಮಂಜೂರಾಗಿದೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅವ್ಯವಸ್ಥೆ ಉಂಟಾಗಿತ್ತು. ಇದನ್ನು ಮನಗಂಡು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಕಳೆದ ತಿಂಗಳು ಜೂ.19ರಂದು ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದರು. ಅನಂತರ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದರು. ಹೀಗಾಗಿ ನಡೆಯಬೇಕಾದ ಕೆಲಸ ಕಾರ್ಯಗಳ ಬಗ್ಗೆ […]
ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

ಉಡುಪಿ: ಅಕ್ರಮ ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಜು.24ರಂದು ಓರ್ವನನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದ ಲಾತೂರು ಜಿಲ್ಲೆಯ ಅವಿನಾಶ್ ದಿಗಂಬರ್ ಲೋಖಂಡೆ(28) ಬಂಧಿತ ಆರೋಪಿ. ಈತನಿಂದ 40ಸಾವಿರ ರೂ. ವೌಲ್ಯದ 2.40ಕೆ.ಜಿ. ಗಾಂಜಾ ಮತ್ತು 5000ರೂ. ವೌಲ್ಯದ ಮೊಬೈಲ್ ವಶಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಪಿ ನಿಶಾ ಜೇಮ್ಸ್ ನಿರ್ದೇಶನದಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ […]