ತೆಂಕನಿಡಿಯೂರು ಕಾಲೇಜಿನಲ್ಲಿ ಇತಿಹಾಸ ಎಂ.ಎ. ಉದ್ಘಾಟನೆ

ಉಡುಪಿ, ಜುಲೈ 19: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇಲ್ಲಿ ಇತಿಹಾಸ ಸ್ನಾತಕೋತ್ತರ ಅಧ್ಯಯನ ಜುಲೈ 17 ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜನಾರ್ಧನ ತೋನ್ಸೆ ನೆರವೇರಿಸಿ ಶುಭ ಹಾರೈಸಿದರು. ಶಿರ್ವ ಸೈಂಟ್ ಮೆರೀಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜನ್ ಮಾತನಾಡಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಸತತ ಅಧ್ಯಯನ ಶೀಲರಾದರೆ ಯಶಸ್ಸು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ […]

ಜನಸಂಖ್ಯಾ ನಿಯಂತ್ರಣ ಇಂದಿನ ಅಗತ್ಯತೆಗಳಲ್ಲಿ ಒಂದು: ಮಾಲಿನಿ ಜೆ. ಶೆಟ್ಟಿ

ಉಡುಪಿ, ಜುಲೈ 19: ಜನಸಂಖ್ಯೆ ಹೆಚ್ಚಳ ಹತ್ತು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತಿದ್ದು, ಜನಸಂಖ್ಯಾ ನಿಯಂತ್ರಣ ಇಂದಿನ ಅಗತ್ಯತೆಗಳಲ್ಲಿ ಒಂದು. ಸಮತೋಲಿತ ಸಮುದಾಯ ಮತ್ತು ಸಂಪನ್ಮೂಲಗಳ ಬಳಕೆ ಸರಿಯಾದ ದಾರಿಯಲ್ಲಿ ಇರಬೇಕು ಮುಂದಿನ ಪೀಳಿಗೆ ಈ ದಿಸೆಯಲ್ಲಿ ಸಾಗಬೇಕು ಎಂದು ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ ಶೆಟ್ಟಿ ತಿಳಿಸಿದರು. ಅವರು ಶುಕ್ರವಾರ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಕಾರ್ಕಳ ಪ್ರಾಥಮಿಕ ಆರೋಗ್ಯ ಕೇಂದ್ರ ಅಜೆಕಾರು […]

ದ.ಕ. ಜಿಲ್ಲೆಯಲ್ಲಿ ಮಳೆ ಚುರುಕು: 2-3 ದಿನ‌ ಮುಂದುವರಿಯುವ ಸಾಧ್ಯತೆ

ಮಂಗಳೂರು: ದ.ಕ.‌ಜಿಲ್ಲೆಯಲ್ಲಿ  ಮಳೆ ಕೊಂಚ ಚುರುಕುಗೊಂಡಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದ್ದು, ಗುರುವಾರವೂ‌‌ ಮುಂದುವರಿದಿದೆ. ಗುರುವಾರ ಮಧ್ಯಾಹ್ನದ ಬಳಿಕ ಉತ್ತಮ ‌ಮಳೆಯಾಗಿದೆ. ಮಂಗಳೂರು ನಗರದಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ಸಂಚಾರಕ್ಕೆ ಅಡ್ಡಿ ಉಂಟಾಯ್ತು. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ನೇತ್ರಾವತಿ, ಕುಮಾರಧಾರ ನದಿ ನೀರಿನ ಮಟ್ಟ ಏರಿಕೆಯಾಗಿದೆ.‌ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನೂ 3, 4 ದಿನಗಳ ಕಾಲ ಭಾರಿ […]

ಕಾರಿನಲ್ಲಿ‌ ಗಾಂಜಾ ‌ಸಾಗಾಟ: ಇಬ್ಬರು ವಶ

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ನೆಕ್ರಾಜೆ ಲಕ್ಷಂಬೀಡು ಕಾಲೋನಿ ನಿವಾಸಿ ಮಹಮ್ಮದ್ ಇಕ್ಬಾಲ್ ಮತ್ತು ಕಾಸರಗೋಡು ಎರಿಯಾಲ್ ಲೈಟ್ ಹೌಸ್ ಬೀಚ್ ರೋಡ್ ನಿವಾಸಿ ಫಜಲ್ ಎ.ಎಂ. ಬಂಧಿತ ಆರೋಪಿಗಳು. ಕೇರಳ ನೋಂದಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಮಣಿಪಾಲದ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಕಾವೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಪದವಿನಂಗಡಿಯಿಂದ ಬೋಂದೆಲ್ ಕಡೆಗೆ ಹೋಗುವ ಈಶ್ವರಕಟ್ಟೆ ಬಳಿ ಆರೋಪಿಗಳನ್ನು […]

ಪ್ರೊ.‌ ಪಾದೂರು ಶ್ರೀಪತಿ ತಂತ್ರಿ ಅವರ ೮೦ ಸಂವತ್ಸರದ ಹಿನ್ನೆಲೆಯಲ್ಲಿ ವಿಚಾರಗೋಷ್ಠಿ, ಅಭಿನಂದನಾ‌ ಸಮಾರಂಭ

ಉಡುಪಿ: ಹಿರಿಯ ಶಿಕ್ಷಣ ತಜ್ಞ ಪ್ರೊ. ಪಾದೂರು ಶ್ರೀಪತಿ ತಂತ್ರಿ ಅವರು ೮೦ ಸಂವತ್ಸರ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಇದೇ ೨೧ರಂದು ನಗರದ ವಿದ್ಯೋದಯ ಪಬ್ಲಿಕ್‌ ಸ್ಕೂಲ್‌ನ ಒಳಾಂಗಣ ಸಭಾಂಗಣದಲ್ಲಿ ವಿಚಾರಗೋಷ್ಠಿ ಹಾಗೂ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಅಭಿನಂದನ ಸಮಿತಿಯ ಸಂಯೋಜಕ ಪ್ರೊ. ವರದೇಶ ಹಿರೇಗಂಗೆ ಗುರುವಾರ ಸುದ್ದಿಗೋಷ್ಢಿಯಲ್ಲಿ‌ತಿಳಿಸಿದರು. ಅಂದು ಬೆಳಿಗ್ಗೆ ೯.೩೦ಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ವಿಚಾರಗೋಷ್ಠಿಯನ್ನು ಉದ್ಘಾಟಿಸುವರು. ಸಂಸ್ಕೃತ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮಲ್ಲೇಪುರಂ ವೆಂಕಟೇಶ ಅವರು ಶ್ರೀಪತಿ ತಂತ್ರಿಯವರ […]