ಹಿಂದೂ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಡಾ.ತ್ರಿವೇಣಿ ವೇಣುಗೋಪಾಲ್ ಪುನರಾಯ್ಕೆ

ಉದ್ಯಾವರ : 162 ವರ್ಷದ ಹಿರಿಯ ಶಿಕ್ಷಣ ಸಂಸ್ಥೆ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಮಹಾಸಭೆಯು ಇತ್ತೀಚಿಗೆ ಜರುಗಿ 2022- 2023 ಸಾಲಿಗೆ ಅಧ್ಯಕ್ಷರಾಗಿ ಡಾ. ತ್ರಿವೇಣಿ ವೇಣುಗೋಪಾಲ್ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಶ್ರೀಮತಿ ರಾಜೀವಿ ಉಮೇಶ್ ಕರ್ಕೇರ, ಕಾರ್ಯದರ್ಶಿಗಳಾಗಿ ಶ್ರೀಮತಿ ಅಶ್ವಿನಿ ದೇವೇಂದ್ರ , ಜತೆಕಾರ್ಯದರ್ಶಿಗಳಾಗಿ ಶ್ರೀಮತಿ ಜ್ಯೋತಿ ರವೀಂದ್ರ ಶೆಟ್ಟಿ ,ಕೋಶಾಧಿಕಾರಿಗಳಾಗಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಆಯ್ಕೆಗೊಂಡರು. ಈ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಬದಲಾದ ಸನ್ನಿವೇಶದಲ್ಲಿ ವಿದ್ಯಾರ್ಥಿಗಳ ಮನಸ್ಥಿತಿಗೆ ಅನುಗುಣವಾಗಿ ಶಿಕ್ಷಕರು ಮತ್ತು ಹೆತ್ತವರು ಬದಲಾಗಬೇಕು- ಡಾ. ನಿಕೇತನ

ಉದ್ಯಾವರ: ಇಂದಿನ ಆಧುನಿಕ ಕಾಲದಲ್ಲಿ ಮಕ್ಕಳ ಮನಸ್ಥಿತಿ ಬದಲಾಗಿದೆ. ಅದರಲ್ಲೂ ಕೋವಿಡ್ – 19 ರಿಂದಾಗಿ ಮಕ್ಕಳು ತಂತ್ರಜ್ಞಾನಕ್ಕೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಜಗತ್ತೇ ಒಂದು ಹಳ್ಳಿಯಾಗಿರುವ ಜಾಗತೀಕರಣದ ಸಂದರ್ಭದಲ್ಲಿ ಮಕ್ಕಳ ಮನಸ್ಥಿತಿಯು ಅದಕ್ಕೆ ಅನುಗುಣವಾಗಿ ಬೆಳೆಯುತ್ತಿದೆ. ಈ ಸನ್ನಿವೇಶದಲ್ಲಿ ಶಿಕ್ಷಕರು ಮತ್ತು ಹೆತ್ತವರು ಕೂಡಾ ತಮ್ಮ ಮನೋಭಾವವನ್ನು ನವೀಕರಿಸಿಕೊಳ್ಳ ಬೇಕಾಗಿದೆ. ಇಲ್ಲವಾದಲ್ಲಿ ಮಕ್ಕಳ ಮನಸ್ಥಿತಿಯೊಂದಿಗೆ ಶಿಕ್ಷಕರ ಮನಸ್ಥಿತಿ ಘರ್ಷಿಸುವ ಹಂತ ತಲುಪಿದರೆ ಇದು ಮಕ್ಕಳ ಮನಸ್ಥಿತಿಯ ಮೇಲೆ ಋಣಾತ್ಮಕ ಪರಿಣಾಮ ಬೀರಿ ಅವರ ಶಿಕ್ಷಣ ಕುಂಠಿತವಾಗುವ ಅಪಾಯವಿದೆ  […]

ವಿದ್ಯಾರ್ಥಿಗಳು ಬರೀ ವಿದ್ಯಾವಂತರಾದರೆ ಸಾಲದು, ಜ್ಞಾನವಂತರೂ ಆಗಬೇಕು – ಆಲ್ವಿನ್ ಆಂದ್ರಾದೆ

ಉದ್ಯಾವರ : ಓದುವುದು ಕೇವಲ ಪಠ್ಯ ಪುಸ್ತಕಗಳಿಗೆ ಮಾತ್ರ ಸೀಮಿತವಾಗಿರದೇ ಇತರ ಪುಸ್ತಕಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪಠ್ಯ ಪುಸ್ತಕಗಳು ವಿದ್ಯಾರ್ಥಿಗಳನ್ನು ವಿದ್ಯಾವಂತರನ್ನಾಗಿಸಿದರೆ, ಇತರ ಪುಸ್ತಕಗಳು ಜ್ಞಾನವಂತರನ್ನಾಗಿಸುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾವಂತರಾಗುವ ಜೊತೆಗೆ ಜ್ಞಾನವಂತರೂ ಆಗಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳಿಗಿದೆ. ಪಠ್ಯ ಪುಸ್ತಕದ ಜೊತೆಗೆ ಇತರ ಪುಸ್ತಕಗಳನ್ನು ಓದುವುದರಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಲ್ವಿನ್ ಆಂದ್ರಾದೆ ಹೇಳಿದರು. ಭಾನುವಾರದಂದು ಸೇವಾ ಮತ್ತು ಸಾಂಸ್ಕೃತಿಕ […]

ಉದ್ಯಾವರ: ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಪಲ್ಟಿ

ಉಡುಪಿ: ಮಂಗಳೂರಿನಿಂದ ಕಾರವಾರ ಕಡೆಗೆ ತೆರಳುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ರಸ್ತೆಬದಿ ಮಗುಚಿ ಬಿದ್ದ ಘಟನೆ ಬುಧವಾರ ಬೆಳಗ್ಗೆ 5:45 ರ ವೇಳೆಗೆ ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಟ್ಯಾಂಕರ್ ಚಾಲಕ ಉದ್ಯಾವರದಲ್ಲಿ ಟ್ಯಾಂಕರಿಗೆ ಡಿಸೇಲ್ ತುಂಬಿಸಿಕೊಂಡು ಮುಂದೆ ಸಾಗಿದ್ದು, ಸ್ವಲ್ಪ ದೂರ ತೆರಳುವಾಗ ಪೆಟ್ರೋಲ್ ಬಂಕ್ ನಲ್ಲಿ ಸ್ವೈಪ್ ಮಾಡಿರುವ ಎಟಿಎಂ ಕಾರ್ಡ್ ಅಲ್ಲೇ ಬಿಟ್ಟಿರುವುದು ಚಾಲಕನ ನೆನಪಿಗೆ ಬಂದಿದೆ. ಹೀಗಾಗಿ ಆತ ಬಲಾಯಿಪಾದೆಯ ಯುಟರ್ನ್ ನಲ್ಲಿ ಟ್ಯಾಂಕರನ್ನು ತಿರುಗಿಸಲು ಪ್ರಯತ್ನಿಸಿದ್ದು […]

ಆಟೋ ರಿಕ್ಷಾ-ಖಾಸಗಿ ಬಸ್ ಢಿಕ್ಕಿ‌; ತಂದೆ ಮಗನಿಗೆ ಗಾಯ

ಉಡುಪಿ: ಆಟೋ ರಿಕ್ಷಾ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ತಂದೆ ಮತ್ತು ಮಗ ಗಂಭೀರ ಗಾಯಗೊಂಡ ಘಟನೆ ಉಡುಪಿ ಸಮೀಪದ ಕೊರಂಗ್ರಪಾಡಿ ಎಂಬಲ್ಲಿ ಬುಧವಾರ ಸಂಭವಿಸಿದೆ. ಉಡುಪಿಯಿಂದ ಕಾರ್ಕಳ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸ್ ಹಾಗೂ ಬುಡ್ನಾರು ನಿವಾಸಿ ರಿಯಾಸ್ ತನ್ನ ಮಗನನ್ನು ವಿಶೇಷ ತರಗತಿಗೆ ಎಮ್‍ಇಟಿ ಉದ್ಯಾವರ ಶಾಲೆಗೆ ತನ್ನದೇ ರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ  ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ […]