ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿಚಾರ ಸಂಕಿರಣ

ಉಡುಪಿ: ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ಧ ಸಂಸ್ಥೆಯಾಗಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉನ್ನತಿ ಕೆರಿಯರ್ ಅಕಾಡೆಮಿಯಲ್ಲಿ ಶನಿವಾರದಂದು ‘ಬಿಎಫ್ಎಸ್ಐ ಕ್ಷೇತ್ರದ ಭವಿಷ್ಯ ಮತ್ತು ಉದ್ಯೋಗಾವಕಾಶಗಳು’ ಕುರಿತ ವಿಷಯದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ್ ಬಿಸಿನೆಸ್ ಸೊಲ್ಯೂಷನ್ಸ್ ನ ಆಪರೇಷನ್ಸ್ ಮ್ಯಾನೇಜರ್ ಶ್ರೀಮತಿ ಆರತಿ ಮಾತನಾಡಿ, “ಅತಿ ವೇಗವಾಗಿ ಬೆಳೆಯುತ್ತಿರುವ ಬಿಎಫ್ಎಸ್ಐ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಉದ್ಯೋಗವಕಾಶಗಳಿವೆ. ಆದರೆ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ […]

ವಿದ್ಯಾರ್ಥಿಗಳು ತಾಂತ್ರಿಕ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿ ಪಡಿಸಿಕೊಳ್ಳಬೇಕು: ಸುಯೋಗ್ ಶೆಟ್ಟಿ

ಉನ್ನತಿ ಕರಿಯರ್ ಅಕಾಡೆಮಿ: ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ, ವಿಚಾರ ಸಂಕಿರಣ ಉಡುಪಿ: ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ಧ ಸಂಸ್ಥೆಯಾಗಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉನ್ನತಿ ಕರಿಯರ್ ಅಕಾಡೆಮಿಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಹಾಗೂ ‘ಐಟಿ ಕ್ಷೇತ್ರದ ಭವಿಷ್ಯ ಮತ್ತು ಉದ್ಯೋಗಾವಕಾಶಗಳು’ ವಿಷಯದ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗೂಗಲ್ ಕ್ಲೌಡ್ ನ ಅತಿ ದೊಡ್ಡ ಪಾಲುದಾರ ಸಂಸ್ಥೆಗಳಲ್ಲೊಂದಾದ ನೀವಿಯಸ್ ಸೊಲ್ಯೂಷನ್ಸ್ ಪ್ರೈ ಲಿ ನ ಸಿಇಒ ಸುಯೋಗ್ ಶೆಟ್ಟಿ ಮಾತನಾಡಿ, […]

ಉನ್ನತಿ ಕರಿಯರ್ ಅಕಾಡೆಮಿ: ಐಟಿ ಕ್ಷೇತ್ರದ ಭವಿಷ್ಯ ಹಾಗೂ ಉದ್ಯೋಗಾವಕಾಶ ವಿಚಾರ ಸಂಕಿರಣ

ಉಡುಪಿ: ಇಲ್ಲಿನ ಉನ್ನತಿ ಕರಿಯರ್ ಅಕಾಡೆಮಿಯಲ್ಲಿ ಮೇ 2, 2022 ರಂದು ಬೆಳಿಗ್ಗೆ 10 ಘಂಟೆಯಿಂದ 11ರ ತನಕ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಹಾಗೂ ಐಟಿ ಕ್ಷೇತ್ರದ ಭವಿಷ್ಯ ಹಾಗೂ ಉದ್ಯೋಗಾವಕಾಶಗಳು ವಿಚಾರ ಸಂಕಿರಣ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಸುಯೋಗ್ ಶೆಟ್ಟಿ-ಸಿಇಓ, ನೀವಿಯಸ್ ಸೊಲ್ಯೂಷನ್ಸ್ ಭಾಗವಹಿಸಲಿದ್ದಾರೆ. ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, ನಿರ್ದೇಶಕಿ ಶ್ರೀಮತಿ ಪೌರ್ಣಮಿ ಪ್ರೇಮ್ ಶೆಟ್ಟಿ ಉಪಸ್ಥಿತರಿರುವರು. ಜಿಲ್ಲೆಯ ವಿವಿಧ ಕಾಲೇಜುಗಳ ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳು […]