ಮಂಗಳೂರು-ಬೆಂಗಳೂರು ಹೆದ್ದಾರಿ: ಭೀಕರ ಅಪಘಾತದಲ್ಲಿ ಇಬ್ಬರು ಸಾವು
ಮಂಗಳೂರು: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು ಇಬ್ಬರು ಮೃತಪಟ್ಟು ಒರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬ ನಡೆದಿದೆ. ಮೃತಪಟ್ಟವರನ್ನು ನೆಲ್ಯಾಡಿಯ ಉದ್ಯಮಿ ಯು.ಪಿ ವರ್ಗೀಸ್ ಅವರ ಸೊಸೆ ಕಾಂಚನ ನಿವಾಸಿ ಶಾಜಿ ಎಂಬವರ ಪತ್ನಿ ಜೈನೀ ಶಾಜಿ (30) ಮತ್ತು ಜೀಸನ್ (40) ಎಂಬವರು ಎಂದು ಗುರುತಿಸಲಾಗಿದೆ. ಸರ್ವೀನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೀಸನ್ ಎಂಬವರು ಧರ್ಮಗುರುದೀಕ್ಷೆ […]
ಉಪ್ಪಿನಂಗಡಿ: ಕಂದಕಕ್ಕೆ ಉರುಳಿದ ಗ್ಯಾಸ್ ಸಿಲಿಂಡರ್ ಟ್ಯಾಂಕರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿ ಅಡುಗೆ ಅನಿಲ ಸಿಲಿಂಡರ್ಗಳ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಘಟನೆ ಭಾನುವಾರ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟ್ಯಾಂಕರ್- ಜೀಪು ಅಪಘಾತ, ಜೀಪು ಚಾಲಕನಿಗೆ ಗಂಭೀರ ಗಾಯ
ಮಂಗಳೂರು: ಟ್ಯಾಂಕರ್ ಹಾಗೂ ಜೀಪು ನಡುವೆ ಅಪಘಾತ ಉಂಟಾಗಿ ಜೀಪು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಬಳಿ ಮಂಗಳವಾರ ಸಂಭವಿಸಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೋಗುತ್ತಿದ್ದ ಜೀಪು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಆಯಿಲ್ ಸಾಗಾಟದ ಮಿನಿ ಟ್ಯಾಂಕರ್ ಢಿಕ್ಕಿಯಾಗಿವೆ. ಢಿಕ್ಕಿಯಾದ ರಭಸಕ್ಕೆ ಜೀಪು ಕಿರು ಸೇತುವೆಗೆ ಉರುಳಿದೆ. ಗಂಭೀರವಾಗಿ ಗಾಯಗೊಂಡ ಜೀಪು ಚಾಲಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ […]