ಸ್ವಾತಂತ್ರ್ಯ ವೀರ್ ಸಾವರ್ಕರ್ ಚಿತ್ರದ ಟ್ರೈಲರ್ ಗೆ ಅಖಂಡ ಭಾರತದಿಂದ ಅಖಂಡ ಪ್ರೀತಿ!! ಮಾರ್ಚ್ 22ರಂದು ತೆರೆಗೆ

ರಣದೀಪ್ ಹೂಡಾ ಅಭಿನಯದ ಸ್ವಾತಂತ್ರ್ಯ ವೀರ್ ಸಾವರ್ಕರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಜೀವನದ ಸ್ವಾತಂತ್ರ್ಯ ಸಂಗ್ರಾಮದ ಪಯಣವನ್ನು ಆಧರಿಸಿದೆ. ನಟನೆಯ ಜೊತೆಗೆ ಹೂಡಾ ಚಿತ್ರವನ್ನು ನಿರ್ದೇಶಿಸಿ, ನಿರ್ಮಿಸಿದ್ದಾರೆ. ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಟ್ರೈಲರ್ ಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಸದ್ಯ ಟ್ರೆಡಿಂಗ್ ನಲ್ಲಿರುವ ಟ್ರೈಲರ್ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಟ ರಣದೀಪ್ ಹೂಡಾ, “ಟ್ರೈಲರ್ ಗೆ ದೊರೆಯುತ್ತಿದೆ ಅಖಂಡ ಭಾರತದ ಅಖಂಡ ಪ್ರೀತಿ ಮತ್ತು […]
ವಿಧಾನಸಭೆ ಅಧಿವೇಶನ: ಒಳಗೆ ವೀರ ಸಾವರ್ಕರ್ ಭಾವಚಿತ್ರ; ಹೊರಗೆ ಪ್ರತಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಒಳಗೆ ವೀರ್ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕಿರುವ ಕರ್ನಾಟಕ ಬಿಜೆಪಿ ಸರ್ಕಾರದ ಕ್ರಮವು ವಿಧಾನಸೌಧ ಕಟ್ಟಡದ ಮೆಟ್ಟಿಲುಗಳ ಮೇಲೆ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಯಿತು. ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣಗೊಳಿಸಿದರು. ಆದರೆ ವಿರೋಧ ಪಕ್ಷಗಳು ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕರ್ನಾಟಕ ವಿಧಾನಸಭೆಯಲ್ಲಿ ವಿವಾದಾತ್ಮಕ ವ್ಯಕ್ತಿಯನ್ನು ಪ್ರದರ್ಶಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು. ವೀರ ಸಾವರ್ಕರ್ ಬಗ್ಗೆ ಜಾಗೃತಿ ಮೂಡಿಸುವ ರಾಜ್ಯಾದ್ಯಂತ ಅಭಿಯಾನದ ಭಾಗವಾಗಿ ಬಿಜೆಪಿಯು […]
ಭಾರತ್ ಜೋಡೋ ಯಾತ್ರೆ ಪೋಸ್ಟರ್ನಲ್ಲಿ ಸಾವರ್ಕರ್: ದುಷ್ಕರ್ಮಿಗಳ ಕೃತ್ಯ ಎಂದ ಕಾಂಗ್ರೆಸ್

ಮಂಡ್ಯ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಪೋಸ್ಟರಿನಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಚಿತ್ರವನ್ನು ಹಾಕಲಾಗಿದ್ದು, ಕಾಂಗ್ರೆಸ್ ಪಕ್ಷವು ಇದು ಯಾರೋ ದುಷ್ಕರ್ಮಿಗಳ ಕೃತ್ಯ ಎಂದು ಆರೋಪಿಸಿದೆ. ಈ ಹಿಂದೆ ಕೇರಳದಲ್ಲಿಯೂ ಸಾವರ್ಕರ್ ಅವರ ಚಿತ್ರವನ್ನು ಹೊಂದಿರುವ ಪೋಸ್ಟರ್ ಒಂದನ್ನು ಹಾಕಲಾಗಿತ್ತು. ಇದೀಗ ಮಂಡ್ಯದಲ್ಲಿ ರಾಹುಲ್ ಗಾಂಧಿ ಇರುವ ಪೋಸ್ಟರಿನಲ್ಲಿ ಮತ್ತೆ ಸಾವರ್ಕರ್ ಭಾವಚಿತ್ರ ಹಾಕಲಾಗಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ.
ವೀರ ಸಾವರ್ಕರ್ ಅವಹೇಳನ ಖಂಡಿಸಿ ಕಾರ್ಕಳದಲ್ಲಿ ಹಿಂದೂ ಸಂಘಟನೆಗಳಿಂದ ಮಾನವ ಸರಪಳಿ ಅಭಿಯಾನ

ಕಾರ್ಕಳ: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರನ್ನು ರಾಜಕೀಯ ವ್ಯಕ್ತಿಗಳು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡು ಅವಹೇಳನ ಮಾಡುತ್ತಿರುವುದು ಖಂಡನೀಯ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸದಸ್ಯ ರಮೇಶ್ ಕಲ್ಲೊಟ್ಟೆ ಹೇಳಿದರು. ಕಾರ್ಕಳದ ಹಿಂದೂ ಜಾಗಣ ವೇದಿಕೆ ಹಾಗೂ ಹಿಂದೂ ಯುವ ವಾಹಿನಿ ವತಿಯಿಂದ ಕಾರ್ಕಳ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾವರ್ಕರ್ ಅವಹೇಳನ ಮಾಡಿದ ಸಿದ್ದರಾಮಯ್ಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರಮೇಶ್ ಕಲ್ಲೊಟ್ಟೆ, ನಮಗೆ ಸ್ವಾತಂತ್ರ್ಯ ಕೇವಲ ಶಾಂತಿಯಿಂದ ಸಿಕ್ಕಿಲ್ಲ […]