ವಿ.ಎಸ್.ಆಚಾರ್ಯ ಬಸ್ ನಿಲ್ದಾಣಕ್ಕೆ ಗಡಿಯಾರ ಹಸ್ತಾಂತರ

ಉಡುಪಿ: ಬನ್ನಂಜೆಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ  ‘ವಿ.ಎಸ್.ಆಚಾರ್ಯ’ ಬಸ್ ನಿಲ್ದಾಣಕ್ಕೆ, ವಿಷ್ಣು ಸೇಲ್ಸ್ ನ ಮಾಲೀಕ ವಿಷ್ಣುಪ್ರಸಾದ್ ಪಾಡಿಗಾರ್ ಮತ್ತು ಲಂಡನ್ ಟೈಮ್ಸ್ ನ ಮಾಲೀಕ ಸುಭಾಷ್ ಇವರು ಉಡುಗೊರೆ ನೀಡಿದ ಮೂರು ಗಡಿಯಾರಗಳನ್ನು ಸಾರಿಗೆ ನಿಗಮದ ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿಗಳಾದ ರಾಜೇಶ್ ಶೆಟ್ಟಿ ಇವರಿಗೆ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಪರವಾಗಿ ಮಠದ ದಿವಾನರಾದ ವರದರಾಜ ಭಟ್ ರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಭಾಗ ಸಂಚಲನಾಧಿಕಾರಿ ಮರಿಗೌಡ, ಉಡುಪಿ ಘಟಕ […]

ಡಾ. ವಿ. ಎಸ್. ಆಚಾರ್ಯ ಮತ್ತು ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರಿಗೆ ಬಸ್ ಗಳ ವೇಳಾಪಟ್ಟಿ

ಉಡುಪಿ: ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಸ್.ಅರ್.ಟಿ.ಸಿ ನಿಗಮದ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಹಾಗೂ ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರ್ವಜನಿಕ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ವ್ಯಾಪ್ತಿಯ ಸ್ಥಳಗಳಾದ ನೆಲ್ಲಿಕಟ್ಟೆ, ಹೆಬ್ರಿ, ಹೊನ್ನಾಳ, ಮಂಚಕಲ್, ಕಾರ್ಕಳ, ಕೊಕ್ಕರ್ಣೆ, ಹೆರ್ಗ, ಶಿರ್ವ-ಮಂಚಕಲ್, ಹಂಪನಕಟ್ಟೆ, ಕೆಳಸಂಕ, ಮಲ್ಪೆಬೀಚ್, ಪಡುಕೆರೆ, ಇತ್ಯಾದಿ ಸ್ಥಳೀಯ ವಲಯಗಳಲ್ಲಿ ಕಾರ್ಯಾಚರಣೆಯಾಗುತ್ತಿರುವ ಸಾರಿಗೆಗಳ ವೇಳಾ ಪಟ್ಟಿ ಹೀಗಿದೆ. ಉಡುಪಿಯಿಂದ ಕಾರ್ಕಳಕ್ಕೆ 6:55, 10:02, 13:47, 16:51, 8:24, 11:32, 14:45, […]

ಬನ್ನಂಜೆ ಡಾ.ವಿ.ಎಸ್ ಆಚಾರ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಾರಿಗೆ ಕಾರ್ಯಾಚರಣೆ ಪ್ರಾರಂಭ

ಉಡುಪಿ: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ. ವಿ. ಎಸ್. ಆಚಾರ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಉಡುಪಿ ನಗರ, ಜಿಲ್ಲಾ, ಅಂತರ್ ಜಿಲ್ಲಾ ಮತ್ತು ಅಂತರ್‌ರಾಜ್ಯ ವ್ಯಾಪ್ತಿಯ ಸ್ಥಳಗಳಿಗೆ ನಿಗಮದ ಎಲ್ಲಾ ಸಾರಿಗೆಗಳ ಕಾರ್ಯಾಚರಣೆಯನ್ನು ಮಾಡಲಾಗುತ್ತಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸದರಿ ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಬಸ್ ನಿಲ್ದಾಣದಲ್ಲಿ 8 ವಾಣಿಜ್ಯ ಮಳಿಗೆ, 1 ಉಪಹಾರ ಗೃಹ, 3 ರಿಟೇಲ್ ಮಳಿಗೆ, ಒಂದು ದ್ವಿಚಕ್ರ /ಕಾರ್ ಪಾರ್ಕಿಂಗ್ ವ್ಯವಸ್ಥೆ, ಮೊದಲ ಅಂತಸ್ತು ಮತ್ತು […]