ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಯಾವುದೇ ತನಿಖೆಗೆ ಸಂಪೂರ್ಣ ಬೆಂಬಲ: ವಿ ಸುನಿಲ್ ಕುಮಾರ್

ಕಾರ್ಕಳ: ಇಲ್ಲಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕಿನಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿದ್ದರೆ ಜಿಲ್ಲಾಡಳಿತ ಯಾವುದೇ ರೀತಿಯ ತನಿಖೆ ಮಾಡಲಿ ನಾನು ಬೆಂಬಲ ನೀಡುತ್ತೇನೆ ಎಂದು ಶಾಸಕ ವಿ ಸುನಿಲ್ ಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸಕ್ಕಾಗಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರು ಪರಶುರಾಮ ಥೀಮ್ ಪಾರ್ಕಿಗೂ ಭೇಟಿ ನೀಡಬೇಕು, ಕಾರ್ಕಳ ಪ್ರವಾಸಿ ತಾಣವಾಗಿ ಬೆಳೆಯಬೇಕು ಇದರಿಂದ ಆರ್ಥಿಕತೆ ಬೆಳೆಯಬೇಕು ಎನ್ನುವ ಕಾರಣಕ್ಕಾಗಿ ಥೀಮ್ ಪಾರ್ಕನ್ನು ಮಾಡಲಾಗಿದೆ. ಅಭಿವೃದ್ದಿಯನ್ನು ಸಹಿಸದ […]

ಸದನದಿಂದ ಅಮಾನತು ಶಿಕ್ಷೆ ನೀಡಿದ ಸಭಾಧ್ಯಕ್ಷರಿಗೆ ಪತ್ರ ಬರೆದ ಕಾರ್ಕಳ ಶಾಸಕ ಸುನಿಲ್ ಕುಮಾರ್

ಬೆಂಗಳೂರು: ಸರ್ಕಾರದ ನಡೆಯನ್ನು ಪ್ರಶ್ನಿಸಿದ ಬಿಜೆಪಿ ನಾಯಕರನ್ನು ಅಮಾನತುಗೊಳಿಸಿದ ಸಭಾಧ್ಯಕ್ಷ ಯುಟಿ ಖಾದರ್ ಅವರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪತ್ರ ಬರೆದಿದ್ದಾರೆ. ಶ್ರೀ ಯು.ಟಿ.ಖಾದರ್ ಸನ್ಮಾನ್ಯ ಸಭಾಧ್ಯಕ್ಷರು ವಿಧಾನಸಭೆ ವಿಷಯ: ಏಕಪಕ್ಷೀಯವಾಗಿ ಅಮಾನತು ಶಿಕ್ಷೆಕೊಟ್ಟದ್ದಕ್ಕಾಗಿ ಧನ್ಯವಾದ ಸಮರ್ಪಣೆ ಮಾನ್ಯ ಸಭಾಧ್ಯಕ್ಷರೇ , ನಿಮ್ಮಿಂದ ನಾವು ಇಂಥದೊಂದು ನಡೆಯನ್ನು ನಿರೀಕ್ಷಿಸಿರಲಿಲ್ಲ. ಸಭಾಧ್ಯಕ್ಷ ಪೀಠದ ಮೇಲೆ ಕುಳಿತು ಎಲ್ಲರನ್ನೂ ಸಮಾನರೆಂದು ಪರಿಗಣಿಸಿ ಪ್ರಜಾಪ್ರಭುತ್ವದ ಮೌಲ್ಯವನ್ನು ಖಾದರ್ ಸಮರ್ಥವಾಗಿ ಎತ್ತಿ ಹಿಡಿಯಬಹುದೆಂಬ ನಮ್ಮ‌ನಿರೀಕ್ಷೆ ಇಂದು ಉಸುಕಿನ ಸೌಧದಂತೆ ಕುಸಿದು ಹೋಗಿದೆ. […]

ಮತಾಂತರ ನಿಷೇಧ ತಿದ್ದುಪಡಿ ರದ್ದು; ಪಠ್ಯ ಬದಲಾವಣೆ: ಕಾಂಗ್ರೆಸ್ ವಿರುದ್ದ ಹರಿಹಾಯ್ದ ಸುನಿಲ್ ಕುಮಾರ್

ಕಾರ್ಕಳ : ರಾಷ್ಟ್ರಭಕ್ತರಾದ ವೀರ್ ಸಾವರ್ಕರ್‌ ಮತ್ತು ಹೆಡ್ಗೆವಾರ್ ಅವರ ಕುರಿತಾದ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರ ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ‌ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ? ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ? ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಸರಕಾರವನ್ನು ಪ್ರಶ್ನಿಸಿದ್ದಾರೆ. ಸಂಪುಟದಲ್ಲಿ ತೆಗೆದುಕೊಂಡ ಈ ಎರಡು ನಿರ್ಣಯದ ವಿರುದ್ಧ […]

ಮೇ 25 ರಂದು ಉಡುಪಿ ಜಿಲ್ಲೆಯ ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ […]

ಕಾರ್ಕಳ ಬಿಜೆಪಿ ವತಿಯಿಂದ ಸುನಿಲ್ ಕುಮಾರ್ ವಿಜಯೋತ್ಸವ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ

ಕಾರ್ಕಳ: ಭಾನುವಾರದಂದು ಬಿಜೆಪಿ ಕಾರ್ಕಳ ವತಿಯಿಂದ ಸುನೀಲ್ ಕುಮಾರ್ ವಿಜಯೋತ್ಸವ, ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಅವರು ಹಣಕ್ಕಾಗಿ ಏನು ಮಾಡಲೂ ಸಿದ್ದ. ಅವರು ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು, ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು. ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ‌, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ […]