ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ: ಹೈದರಾಬಾದ್-ಬೆಂಗಳೂರು ಮಾರ್ಗಕ್ಕೂ ರೈಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಈ ರೈಲುಗಳ ಪ್ರಾರಂಭವು 11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುತ್ತದೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಇವು ವಂದೇ ಭಾರತ್ ರೈಲುಗಳ ಪ್ರಾರಂಭದಿಂದ ಪ್ರಯೋಜನ ಪಡೆಯುವ ರಾಜ್ಯಗಳು. ಈ ವಂದೇ […]
ಕರಾವಳಿ ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದೊಳಗೆ ಬರಲಿದೆ ವಂದೇ ಭಾರತ್ ಎಕ್ಸ್ ಪ್ರೆಸ್? ಸಂಸದರಿಗೆ ರೈಲ್ವೆ ಸಚಿವರ ಭರವಸೆ

ಉಡುಪಿ/ಮಂಗಳೂರು: ಕರಾವಳಿಯ ಜನರ ಬಹುದಿನದ ಬೇಡಿಕೆ ವಂದೇ ಭಾರತ್ ಎಕ್ಸ್ ಪ್ರೆಸ್ ಸೌಲಭ್ಯ. ಹಲವಾರು ತಾಂತ್ರಿಕ ಕಾರಣಗಳಿಂದ ಕರಾವಳಿಯ ಅವಳಿ ಜಿಲ್ಲೆಗಳಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ನ ಸೌಕರ್ಯ ಲಭಿಸಿಲ್ಲ. ಆದರೆ ಇದೀಗ ಮಂಗಳೂರು ಮತ್ತು ಮಡ್ ಗಾಂವ್(ಗೋವಾ) ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಓಡುವ ನಿರೀಕ್ಷೆ ಇದೆ ಎಂದು ದ ಹಿಂದು ವರದಿ ಹೇಳಿದೆ. ಈ ಬಗ್ಗೆ ದ.ಕ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ […]
ಕಾಸರಗೋಡು-ಮಂಗಳೂರು ಮಾರ್ಗದಲ್ಲಿ “ವಂದೇ ಭಾರತ್” ಸೂಚನಾ ಫಲಕಗಳ ಅಳವಡಿಕೆ

ಕಣ್ಣೂರು: ಕೇರಳದಲ್ಲಿ ಓಡಲಿರುವ ಸಂಭವನೀಯ ಎರಡನೇ ವಂದೇ ಭಾರತ್ ರೈಲಿನ ಅಂತಿಮ ಮಾರ್ಗವನ್ನು ಇನ್ನೂ ಅಧಿಕೃತವಾಗಿ ಘೋಷಿಸಲಾಗಿಲ್ಲ. ಆದಾಗ್ಯೂ, ಮಂಗಳೂರು-ಕಾಸರಗೋಡು ವಿಭಾಗದ ನಿಲ್ದಾಣಗಳಲ್ಲಿ “ವಂದೇ ಭಾರತ್” ಎಂದು ಸೂಚಿಸುವ ಫಲಕಗಳನ್ನು ಅಳವಡಿಸಲಾಗಿದ್ದು ಇದು ಈ ಭಾಗದಲ್ಲಿ ಇಂಜಿನ್ ಅನ್ನು ನಿಲ್ಲಿಸಲು ಲೋಕೋ ಪೈಲಟ್ಗಳಿಗೆ ಸೂಚನೆಯಾಗಿದೆ. ಈ ಅಳವಡಿಕೆಯು ವಂದೇ ಭಾರತ್ ರೈಲು ಕಾಸರಗೋಡು-ಮಂಗಳೂರು ಮಾರ್ಗವನ್ನು ಒಳಗೊಳ್ಳುತ್ತದೆ ಎಂದು ಸೂಚಿಸುತ್ತದೆ. ಈಗಿರುವ ರೈಲು ತಿರುವನಂತಪುರ-ಕಾಸರಗೋಡು ಮಾರ್ಗದಲ್ಲಿ ಸಂಚರಿಸುತ್ತದೆ. ಮಂಗಳೂರು-ತಿರುವನಂತಪುರಂ, ಮಂಗಳೂರು-ಕೊಟ್ಟಾಯಂ, ಮಂಗಳೂರು-ಎರ್ನಾಕುಲಂ, ಮತ್ತು ಮಂಗಳೂರು-ಕೊಯಂಬತ್ತೂರು ಇವು ಕೇರಳದಲ್ಲಿ ಎರಡನೇ […]
ಭೋಪಾಲ್-ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್ ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

ನವದೆಹಲಿ: ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ನ ಒಂದು ಕೋಚ್ನಲ್ಲಿನ ಬ್ಯಾಟರಿ ಬಾಕ್ಸ್ ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಆದರೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಮಧ್ಯಪ್ರದೇಶದ ಕುರ್ವೈ ಕೆಥೋರಾ ನಿಲ್ದಾಣದಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರೈಲು ಬೆಳಿಗ್ಗೆ 5.40 ರ ಸುಮಾರಿಗೆ ಭೋಪಾಲ್ನಿಂದ ಹೊರಟು ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣವನ್ನು ಮಧ್ಯಾಹ್ನ 1.10 ರ ಸುಮಾರಿಗೆ ತಲುಪುತ್ತದೆ. ಸ್ಥಳದ ದೃಶ್ಯಗಳು ಚಕ್ರಗಳ ಬಳಿಯಿಂದ ಹೊಗೆ ಹೊರಹೊಮ್ಮುವುದನ್ನು […]
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರಿನ ತನಕ ವಿಸ್ತರಿಸುವಂತೆ ಕೇಂದ್ರ ಸಚಿವೆಗೆ ಮನವಿ ಸಲ್ಲಿಸಿದ ಯಶ್ ಪಾಲ್ ಸುವರ್ಣ

ಉಡುಪಿ: ಇಲ್ಲಿನ ಶಾಸಕ ಯಶ್ ಪಾಲ್ ಸುವರ್ಣ ಅವರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದಲ್ಲಿ ಉಡುಪಿ ಹಾಗೂ ಮಂಗಳೂರು ಭಾಗದ ಪ್ರಯಾಣಿಕರಿಗೆ ಇದರ ಪ್ರಯೋಜನ ಲಭಿಸಲಿದೆ. ಅಲ್ಲದೆ ಕಾರವಾರದಿಂದ […]