ಹಳೇಕೋಟೆ ಮಾರಿಯಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಮಂಗಳೂರು: ಕರಾವಳಿಯ ಅತ್ಯಂತ ಪುರಾತನ ದೇಗುಲಗಳಲ್ಲಿ ಒಂದಾಗಿರುವ ಬೋಳಾರ ಹಳೇಕೋಟೆ ಮಾರಿಯಮ್ಮ ಮಹಿಷಮರ್ಧಿನಿ ದೇವಸ್ಥಾನದ ಆವರಣದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಅವರು ಸುಮಾರು 800 ವರ್ಷಗಳ ಇತಿಹಾಸವಿರುವ ಬೋಳಾರ ಹಳೇಕೋಟೆ ಮಾರಿಯಮ್ಮ ಮಹಿಷ ಮರ್ಧಿನಿ ದೇವಸ್ಥಾನವು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪೌರಾಣಿಕ ಇತಿಹಾಸಗಳ ಕುರುಹುಗಳನ್ನು ಉಳಿಸಿಕೊಂಡಿರುವ ದೇವಾಲಯಗಳಲ್ಲಿ ಒಂದಾಗಿದೆ. ನಗರದ ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಯ ಕುರಿತು ವಿಶೇಷ ಕಾಳಜಿ ವಹಿಸಿರುವ ನಮ್ಮ ಸರಕಾರ […]