ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಬ್ರಹ್ಮಾವರ: ಡಾ. ಸರ್ವಪಳ್ಳಿ ರಾಧಾಕೃಷ್ಣನ್ ರವರು ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ ಎನ್ನುತ್ತಿದ್ದರು. ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆಯಲ್ಲಿ ಸೋಮವಾರದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯರವರು ಉಪನ್ಯಾಸಕರಿಗೆ ಶುಭಾಶಯ ಕೋರಿದರು. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲೆ ಶ್ರೀಮತಿ ಡಾ. ಸೀಮಾ ಭಟ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕು.ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

ಸಿ.ಎ. ಫೌಂಡೇಶನ್ ಅರ್ಹತಾ ಪರೀಕ್ಷೆ: ವಿದ್ಯಾಲಕ್ಷ್ಮಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ

ಬ್ರಹ್ಮಾವರ:ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಬ್ರಹ್ಮಾವರದ ವಿದ್ಯಾ ಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜಿನ ವಿದ್ಯಾರ್ಥಿಗಳಾದ ಜಿವೆಲ್ ಪ್ರಾರ್ಥನಾ ಮತ್ತು ಪ್ರಿಯಾ ಕಾರ್ವಿ ಇವರು ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿಗಳಾದ ಜಿವೆಲ್ ಪ್ರಾರ್ಥನಾ ಮತ್ತು ಪ್ರಿಯಾ ಕಾರ್ವಿ ಇವರಿಗೆ ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಬ್ರಮಣ್ಯ, ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್, ವಾಣಿಜ್ಯ […]

ವಿದ್ಯಾಲಕ್ಷ್ಮೀ ಕಾಲೇಜಿನ ಪ್ರಾಂಶುಪಾಲೆ ಸೀಮಾ ಜಿ ಭಟ್ ಅವರಿಗೆ ಡಾಕ್ಟರೇಟ್ ಪದವಿ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜಿನ ಪ್ರಾಂಶುಪಾಲೆ ಸೀಮಾ ಜಿ ಭಟ್ ಅವರು ಸುಳ್ಯ ಕೆ.ವಿ.ಜಿ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಮ್ಯಾನೇಜ್ ಮೆಂಟ್ ನ ಎಂಬಿಎ ವಿಭಾಗದ ಪ್ರೊಫೆಸರ್ ಹಾಗೂ ಮುಖ್ಯಸ್ಥೆ ಡಾ. ಸುರೇಖಾ ಪ್ರದೀಪ್ ಪ್ರಭು ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿರುವ ಮಹಾಪ್ರಬಂಧಕ್ಕೆ ಬೆಳಗಾವಿ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ದೊರೆತಿದೆ. “ಆರ್ಗನೈಜೇಷನಲ್ ಎರ್ಗೊನೊಮೊಕ್ಸ್ ಎಂಡ್ ಎಂಪ್ಲಾಯೀ ಸಾಟಿಸಿಫ್ಯಾಕ್ಷನ್ ಇಶ್ಯೂಸ್, ಇನ್ ಫ್ಯ್ಲೂಯೆನ್ಸಸ್ ಎಂಡ್ ಇನ್ಸೈಟ್ಸ್- ಎ ಸ್ಟಡಿ ವಿಥ್ ರೆಫೆರೆನ್ಸ್ ಟು […]

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಟ್ರೇಡ್ ಬುಲ್ಸ್ ಕಂಪನಿಯ ಕ್ಯಾಂಪಸ್ ಡ್ರೈವ್

ಬ್ರಹ್ಮಾವರ: ಭಾರತದಲ್ಲಿ ಅತ್ಯುತ್ತಮ ಹೆಸರು ಗಳಿಸಿದ ಟ್ರೇಡ್ ಬುಲ್ಸ್ ಕಂಪನಿಯ ಕ್ಯಾಂಪಸ್ ಸೆಲೆಕ್ಷನ್ ತಂಡವು ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಗೆ ಜುಲೈ 29 ರಂದು ಭೇಟಿ ನೀಡಿತು. ಟ್ರೇಡ್ ಬುಲ್ಸ್ ಕಂಪನಿಯ ಪ್ರತಿನಿಧಿಗಳಾದ ನಯಿಮ್ ಅಕ್ತರ್, ಮಹಮ್ಮದ್ಸಿನಾನ್, ಮಂಜುನಾಥ್ ಇವರುಗಳು ಆಗಮಿಸಿ, ಸಂಸ್ಥೆಯ ವಿದ್ಯಾರ್ಥಿಗಳನ್ನು ಸಂದರ್ಶನಕ್ಕೆ ಒಳಪಡಿಸಿ ಒಟ್ಟು 16 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದರು. ಇದಲ್ಲದೆ ಸುಮಾರು 57 ವಿದ್ಯಾರ್ಥಿಗಳು ಟಿಸಿಎಸ್ ,ಅಪ್ ಸ್ಕಿಲ್ಸ್, ಅಮೆಜಾನ್, ಇಂಡಿಗೋ ಹೀಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗಕ್ಕಾಗಿ ಆಯ್ಕೆಯಾಗಿರುತ್ತಾರೆ. ಕಾರ್ಯಕ್ರಮದ […]

ಬ್ರಹ್ಮಾವರ: ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ ಟಿಟ್ಯೂಟ್ ನಲ್ಲಿ ಪರಿಸರ ದಿನಾಚರಣೆ

ಬ್ರಹ್ಮಾವರ: ಬ್ರಹ್ಮಾವರ ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ ಟಿಟ್ಯೂಟ್ ಸಂಸ್ಥೆಯಲ್ಲಿ, ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಇದರ ಜೊತೆಗೆ ಪರಿಸರ ದಿನದ ಹಿನ್ನೆಲೆಯಲ್ಲಿ ರಸಪ್ರಶ್ನೆ ಮತ್ತು ತರಗತಿ ಕೊಠಡಿಯ ಅಲಂಕಾರದಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿದ್ಯಾರ್ಥಿಗಳು ತಾವೇ ಖುದ್ದಾಗಿ ನಿರ್ಮಿಸಿದ ವಸ್ತುಗಳನ್ನು ಉಪಯೋಗಿಸಿ ಕೊಠಡಿಯ ಅಲಂಕಾರ ಕೈಗೊಂಡರು. ಕಸದಿಂದ ರಸ ಅನ್ನುವ ಪರಿಕಲ್ಪನೆಯನ್ನು ಅಳವಡಿಸಿಕೊಂಡು ಪರಿಸರ ಸಂರಕ್ಷಣೆಯ ಹಾದಿಯಲ್ಲಿ ಸಂಸ್ಥೆಯು ಹೆಜ್ಜೆ ಇಟ್ಟಿದ್ದು ಸಮಾಜದಲ್ಲಿ ಉತ್ತಮ ಮಾದರಿಯಾಗಿದೆ. ಈ […]