ದಾಖಲೆ ಬೆಲೆಗೆ ಮಾರಾಟವಾಯ್ತು ಬಾಕ್ಸ್ ಆಫೀಸ್ ಬಾಹುಬಲಿ ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ವಿದೇಶೀ ಹಕ್ಕು!

ಭಾರತೀಯ ಚಿತ್ರರಂಗದ ಬಾಹುಬಲಿ ಎಂದೇ ಖ್ಯಾತನಾಮ ಪ್ರಭಾಸ್, ಬಾಕ್ಸ್ ಆಫೀಸ್ ಕೊಳ್ಳೆಹೊಡೆಯುವ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಹಾಗೂ ಕೆ.ಜಿ.ಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜೋಡಿಯ “ಸಲಾರ್” ಚಿತ್ರವು ಬಿಡುಗಡೆಗೂ ಮುನ್ನವೇ ಸದ್ದುಮಾಡುತ್ತಿರುವ ವರದಿಗಳಾಗಿವೆ. ವರದಿಗಳನ್ನು ನಂಬುವುದಾದರೆ, ಸಲಾರ್ನ ವಿದೇಶಿ ಹಕ್ಕುಗಳು 90 ರಿಂದ100 ಕೋಟಿ ರೂ.ಗೆ ಮಾರಾಟವಾಗಿದೆ. ಈ ಅಂಕೆಯೊಂದಿಗೆ, ಪ್ರಭಾಸ್ ಅಭಿನಯದ ಸಲಾರ್ ಚಿತ್ರವು ಅತಿ ಹೆಚ್ಚು ವಿದೇಶಿ ಹಕ್ಕುಗಳ ಒಪ್ಪಂದ ಹೊಂದಿದ ತೆಲುಗು ಚಲನಚಿತ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. https://twitter.com/box0fficeindia/status/1642119837295194112?ref_src=twsrc%5Etfw%7Ctwcamp%5Etweetembed%7Ctwterm%5E1642119837295194112%7Ctwgr%5E91090cc57ea5e82f0daabbf964368ca74396f145%7Ctwcon%5Es1_&ref_url=https%3A%2F%2Fwww.indiatvnews.com%2Fentertainment%2Fregional-cinema%2Fprabhas-starrer-salaar-scripts-history-with-highest-overseas-rights-heres-what-we-know-latest-entertainment-news-2023-04-01-859614 ಪ್ರಭಾಸ್ ಅವರ […]
ಪ್ರಧಾನಿ ಮೋದಿ ಭೇಟಿ ಮಾಡಿದ ಕನ್ನಡ ಚಿತ್ರರಂಗದ ಕಲಾವಿದರು

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಯಶ್, ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು, ಬ್ಲಾಗರ್ ಅಯ್ಯೋ ಶ್ರದ್ಧಾ ಮತ್ತು ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಇಂಡಿಯಾ ಪವಿಲಿಯನ್ ನಲ್ಲಿ ಏರೋ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದು ಈ ಸಂದರ್ಭ ಭೇಟಿ ನಡೆದಿದೆ. ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಯಶ್, ಮೋದಿಯವರ ಬಳಿ ಚಿತ್ರೋದ್ಯಮದ ಬಗ್ಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. […]
2024 ರಲ್ಲಿ ಬರಲಿದೆ ಕಾಂತಾರ ಭಾಗ-1: ಪ್ರೀಕ್ವೆಲ್ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ

ಬಹುಚರ್ಚಿತ ಮತ್ತು ವಿಶ್ವದಾದ್ಯಂತ ಜನಮನ್ನಣೆ ಗಳಿಸಿದ ಕಾಂತಾರ ಚಿತ್ರವು ಯಶಸ್ವಿ ನೂರು ದಿನಗಳನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ಕಾಂತಾರದ ಪೂರ್ವಾಭಾವಿ ಕಥೆಯನ್ನೊಳಗೊಂಡ ಕಾಂತಾರ ಪ್ರೀಕ್ವಲ್ ಅನ್ನು 2024ರಲ್ಲಿ ತೆರೆಗೆ ತರಲಿರುವುದಾಗಿ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಥಿಯೇಟರ್ಗಳಲ್ಲಿ “ಕಾಂತಾರ”ದ ಶತದಿನೋತ್ಸವವನ್ನು ಆಚರಿಸಲು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿಷಬ್ ಬಹು ನಿರೀಕ್ಷಿತ ಚಿತ್ರದ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆ. ಕಾಂತಾರ ಚಿತ್ರಕ್ಕೆ ಅಪಾರ ಪ್ರೀತಿ ಮತ್ತು ಬೆಂಬಲವನ್ನು ತೋರಿಸಿದ ಪ್ರೇಕ್ಷಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಾವು ತುಂಬಾ ಸಂತೋಷದಲ್ಲಿದ್ದೇವೆ. ದೈವದ ಆಶೀರ್ವಾದದಿಂದ […]
ಎಲ್ಲರ ಬಾಳು ಬಂಗಾರವಾಗಿಸಲಿದೆ ಹೊಂಬಾಳೆ: ಮುಂದಿನ 5 ವರ್ಷಗಳಲ್ಲಿ 3,000 ಕೋಟಿ ರೂ ಹೂಡಿಕೆ ಮಾಡಲಿದೆ ಚಿತ್ರ ನಿರ್ಮಾಣ ಸಂಸ್ಥೆ!

2022 ರಲ್ಲಿ ಬೆನ್ನು ಬೆನ್ನಿಗೆ ಎರಡು ಯಶಸ್ವಿ ಚಿತ್ರಗಳಾದ ಕೆ.ಜಿ.ಎಫ್-೨ ಮತ್ತು ಕಾಂತಾರ ಚಿತ್ರಗಳನ್ನು ನೀಡಿದ ನಿರ್ಮಾಪಕ ವಿಜಯ್ ಕಿರಗಂದೂರು ಮುಂದಿನ ಐದು ವರ್ಷಕ್ಕೆ ಬರೋಬ್ಬರಿ 3,000 ಕೋಟಿ ರೂ ಹೂಡಿಕೆ ಮಾಡಲಿದ್ದಾರೆ. ಅಲ್ಲದೆ, ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯು ಮುಂದಿನ ಎರಡು ವರ್ಷಗಳಲ್ಲಿ 10-12 ಚಿತ್ರಗಳನ್ನು ನಿರ್ಮಿಸುವ ಯೋಜನೆಯನ್ನು ಹಾಕಿಕೊಂಡಿದೆ. ದಕ್ಷಿಣ ಭಾರತದ ಘಟಾನುಘಟಿ ನಟರನ್ನು ಹೊಂಬಾಳೆ ಫಿಲ್ಮ್ಸ್ ತೆರೆಗೆ ತರಲಿದ್ದು ಹೊಂಬಾಳೆಯಿಂದ ಎಲ್ಲರ ಬಾಳು ಬಂಗಾರವಾಗಲಿದೆ. ಪ್ರಭಾಸ್ ನಟನೆಯ ಸಲಾರ್, ಪೃಥ್ವಿರಾಜ್ ನ ಟೈಸನ್, […]
ಸದ್ಯಕ್ಕೆ ‘ಕಾಂತಾರ- 2’ ಬಗ್ಗೆ ಯಾವುದೇ ಯೋಜನೆಗಳಿಲ್ಲ; ಇದ್ದರೆ ಅಧಿಕೃತ ಘೋಷಣೆ ಮಾಡುತ್ತೇವೆ: ರಿಷಬ್ ಶೆಟ್ಟಿ

ನಟ, ನಿರ್ದೇಶಕ ಮತ್ತು ನಿರ್ಮಾಪಕ ರಿಷಬ್ ಶೆಟ್ಟಿ ಕಾಂತಾರ ಚಿತ್ರದ ಎರಡನೇ ಅವತರಣಿಕೆ ಬರಲಿದೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸದ್ಯಕ್ಕೆ ನಮ್ಮಲ್ಲಿ ಅಂತಹ ಯಾವುದೇ ಯೋಜನೆಗಳಿಲ್ಲ. ಕಾಂತಾರ 2 ರ ಅಂತಹ ಯಾವುದೇ ಯೋಜನೆ ಇದ್ದರೆ, ನಾವು ಅಧಿಕೃತ ಘೋಷಣೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗಷ್ಟೆ ರಿಷಬ್ ಮತ್ತು ಪ್ರಗತಿ ಶೆಟ್ಟಿ ಮಂಗಳೂರಿನ ಭೂತ ಕೋಲವೊಂದರಲ್ಲಿ ದೈವದೆದುರು ನಿಂತಿರುವ ದೃಶ್ಯಗಳನ್ನು ಉಲ್ಲೇಖಿಸಿ ರಿಷಭ್ ಕಾಂತಾರ-2 ಮಾಡಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ರಿಷಬ್ ಇದನ್ನು […]