ವಿಶ್ವಪ್ರಿಯತೀರ್ಥ ಶ್ರೀಪಾದರಿಗೆ ಯಕ್ಷಗಾನ ಕಲಾರಂಗದ ವತಿಯಿಂದ ಗೌರವಾರ್ಪಣೆ

ಉಡುಪಿ: ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರ ಷಷ್ಠಿಪೂರ್ತಿ ಸಂದರ್ಭದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದಿಂದ ಆಯೋಜಿಸಿದ ವಿಶ್ವಾರ್ಪಣಂ ಸಮಾರಂಭದಲ್ಲಿ ಯಕ್ಷಗಾನ ಕಲಾರಂಗ ಸಂಸ್ಥೆಯ ವತಿಯಿಂದ ಶ್ರೀಗಳನ್ನು ಅಭಿನಂದಿಸಲಾಯಿತು. 15 ವರ್ಷದ ಹಿಂದೆ ವಿದ್ಯಾಪೋಷಕ್ ಸಂಸ್ಥೆಯನ್ನು ಜ್ಯೋತಿಬೆಳಗಿಸಿ ಉದ್ಘಾಟಿಸಿ, ನಿರಂತರವಾಗಿ ಸಂಸ್ಥೆಯನ್ನು ಪೋತ್ಸಾಹಿಸುತ್ತಾ ಬಂದ ಶ್ರೀಗಳನ್ನು ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ್ ರಾವ್ ಫಲವಸ್ತು ಅರ್ಪಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠಾಧೀಶರಾದವಿದ್ಯಾಧೀಶತೀರ್ಥ ಶ್ರೀಪಾದರು, ಅದಮಾರು ಮಠದ ಕಿರಿಯ ಯತಿಗಳಾದ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪಲಿಮಾರು ಮಠದ […]