ಎಡನೀರು ಮಠದ ಭಾವಿಉತ್ತರಾಧಿಕಾರಿ ಜಯರಾಮ ಮಂಜತ್ತಾಯರಿಂದ ಉಡುಪಿ ಅಷ್ಟಮಠಾಧೀಶರ ಭೇಟಿ, ಸಮಾಲೋಚನೆ

ಉಡುಪಿ: ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಎಡನೀರು ತೋಟಕಾಚಾರ್ಯ ಮಠಕ್ಕೆ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವ ಜಯರಾಮ ಮಂಜತ್ತಾಯ (ಸಚ್ಚಿದಾನಂದ ಭಾರತೀ ಸ್ವಾಮೀಜಿ) ಅವರು ತಮ್ಮ ಸನ್ಯಾಸ ದೀಕ್ಷಾ ಪೂರ್ವಭಾವಿ ತೀರ್ಥಕ್ಷೇತ್ರ ಸಂಚಾರ ಪ್ರಯುಕ್ತ ಶುಕ್ರವಾರ ಉಡುಪಿಗೆ ಭೇಟಿ ನೀಡಿದರು. ಉಡುಪಿ ಕೃಷ್ಣಮುಖ್ಯಪ್ರಾಣ ದೇವರ ದರ್ಶನ ಪಡೆದ ಬಳಿಕ ಶ್ರೀಮದನಂತೇಶ್ವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿರುವ ಜಗದ್ಗುರು ಶ್ರೀ ಮಧ್ವಾಚಾರ್ಯರ ಅದೃಶ್ಯ ಸನ್ನಿಧಾನದ ದರ್ಶನ ಪಡೆದರು.‌ ಬಳಿಕ ಪರ್ಯಾಯ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ, ಹಿರಿಯ ವಿಶ್ವಪ್ರಿಯ ಸ್ವಾಮೀಜಿ ಭೇಟಿ […]