ಮಂಗಳೂರು: ಇಡಿ ಅಧಿಕಾರಿಗಳೆಂದು ಹೇಳಿ ಉದ್ಯಮಿ ಮನೆಗೆ ದಾಳಿ; ಸುಮಾರು 30 ಲಕ್ಷ ರೂ. ದರೋಡೆ.

ವಿಟ್ಲ: ದರೋಡೆಕೋರರು ಇಡಿ ಅಧಿಕಾರಿಗಳ ಶೈಲಿಯಲ್ಲಿ ಬೋಳಂತೂರು ಸಮೀಪದ ನಾರ್ಶದ ಉದ್ಯಮಿಯ ಮನೆಗೆ ದಾಳಿ ನಡೆಸಿ ಸುಮಾರು 30 ಲಕ್ಷ ರೂ. ದೋಚಿದ ಘಟನೆ ಜ.3 ರ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿನ ನಿವಾಸಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಶುಕ್ರವಾರ ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡವೊಂದು ದಾಳಿ ನಡೆಸಿದಂತೆ […]