ಬರಿದಾಗುತ್ತಿದೆ ಅಂತರ್ಜಲ: ಕರಾವಳಿಗರಿಗೆ “ಹಾಟ್” ನ್ಯೂಸ್! ಮುಂದಿದೆ ಸಂಕಷ್ಟ?

ದಕ್ಷಿಣ ಕನ್ನಡದಲ್ಲಿ ಬಿಸಿಲಿನ ತೀವ್ರತೆ: ಅಂತರ್ಜಲ ಮಟ್ಟ ಕುಸಿತ, ಕುಡಿಯುವ ನೀರಿಗೆ ಆತಂಕ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈ ಬಾರಿ ಪರಿಸ್ಥಿತಿ ತೀವ್ರವಾಗಿ ಬದಲಾಗಿದೆ. 35–36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕುಸಿಯುತ್ತಿದೆ ಅಂತರ್ಜಲ, ಬರಿದಾಗುತ್ತಿವೆ ಬಾವಿಗಳು ಜಿಲ್ಲೆಯ ಹಲವು ಭಾಗಗಳಲ್ಲಿ, ವಿಶೇಷವಾಗಿ ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ, ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದೆ. ಎಂದಿಗೂ ನೀರಿನಿಂದ […]