ಪಶ್ಚಿಮಘಟ್ಟ ತಪ್ಪಲಿನ ಔಷಧೀಯ ಸಸ್ಯಗಳ ಬೆಳೆಗೆ ಸರ್ವ ಸಹಕಾರ: ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಎಲ್ಲಾ ಕ್ಯಾಂಪ್ಕೋ ಸದಸ್ಯರ ಮೂಲಕ ಪಶ್ಚಿಮಘಟ್ಟ ತಪ್ಪಲಿನ ಔಷಧೀಯ ಸಸ್ಯಗಳ ಬೆಳೆಗೆ ಎಲ್ಲಾ ರೀತಿಯ ಅಗತ್ಯ ಪ್ರೋತ್ಸಾಹ ನೀಡುವುದಾಗಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ ಹೇಳಿದರು. ಅವರು ಗುರುವಾರ ಕಾರ್ಕಳ ತಾಲೂಕು ಬಜಗೋಳಿಯ ತ್ರಿಭುವನ ಮಾಳದಲ್ಲಿ, ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ಕಾಂಪ್ಕೋ ಮಂಗಳೂರು ಇವರ ಸಹಯೋಗದಲ್ಲಿ ರಾಷ್ಟ್ರೀಯ ಔಷಧಿ ಗಿಡಮೂಲಿಕಾ ಮಂಡಳಿ ಪ್ರಾಯೋಜಿತ ಯೋಜನೆ […]

ಹಿಮಾಲಕ್ಕೂ ಹಳೆಯದಾದ ಪಶ್ಚಿಮ ಘಟ್ಟಗಳನ್ನು ರಕ್ಷಿಸುವುದು ಅವಶ್ಯ: ಡಾ.ವಿವೇಕ್ ಪಂಡಿ

ಮಣಿಪಾಲ: ಇಂದು ನಾವು ಪರಿಸರ ಸುಸ್ಥಿರತೆಯ ದೃಷ್ಟಿಯಿಂದ ಯೋಚಿಸದೆ, ಕೇವಲ ಆರ್ಥಿಕ ಸುಸ್ಥಿರತೆಯ ದೃಷ್ಟಿಯಿಂದ ಮಾತ್ರ ಯೋಚಿಸುತ್ತಿರುವುದು ದುರದೃಷ್ಟಕರ ವಿಚಾರ. ಹಿಮಾಲಯಕ್ಕಿಂತ ಹಳೆಯದಾದ ಪಶ್ಚಿಮ ಘಟ್ಟಗಳು ಈಗಾಗಲೇ ಜೀವೈವಿಧ್ಯವನ್ನು ಕಳೆದುಕೊಂಡು ಅಪಾರ ಹಾನಿಯನ್ನು ಅನುಭವಿಸಿವೆ ಹಾಗಾಗಿ ಇದನ್ನು ‘ಹಾಟ್‌ಸ್ಪಾಟ್‌’ ಎಂದು ಗುರುತಿಸಲಾಗಿದೆ. ಇಲ್ಲಿ ಜೀವವೈವಿಧ್ಯಗಳ ನಡುವೆ ಕ್ಲಿಷ್ಟ ಮತ್ತು ಸೂಕ್ಷ್ಮವಾದ ಪರಿಸರ ಜಾಲವಿದೆ. ಇದನ್ನು ಎಲ್ಲಾ ರೀತಿಯ ಆಕ್ರಮಣಗಳಿಂದ ರಕ್ಷಿಸಬೇಕಾಗಿದೆ ಎಂದು ಮಾಹೆಯ ಪರಿಸರಶಾಸ್ತ್ರಜ್ಞ ಡಾ.ವಿವೇಕ್ ಪಂಡಿ ನುಡಿದರು. ಅವರು ಶನಿವಾರ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ […]