ಪ್ರವಾಸೋದ್ಯಮದಲ್ಲಿ ಸ್ಥಳೀಯ ಪರಂಪರೆಗೆ ಒತ್ತು ನೀಡಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಕರಾವಳಿ ಪ್ರವಾಸೋದ್ಯಮ ಕ್ಷೇತ್ರಗಳನ್ನು ಪ್ರವಾಸಿಗರ ಅಗತ್ಯಕ್ಕೆ ತಕ್ಕಂತೆ ಸ್ಥಳೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಕಲೆಗಳಿಗೆ ಒತ್ತು ನೀಡಿ ಅಭಿವೃದ್ಧಿಗೊಳಿಸುವುದರೊಂದಿಗೆ ಜನಾಕರ್ಷಣೆಗೊಳಿಸಬೇಕು ಎಂದು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಬುಧವಾರ ನಗರದ ಅಜ್ಜರಕಾಡು ಪುರಭವನದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ನಗರಸಭೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ರಮಣೀಯ ಪ್ರಕೃತಿ ಸೌಂದರ್ಯ, ಕಡಲ ತೀರ, ಇಲ್ಲಿನ […]

ಸೆ. 27 ರಂದು ಪ್ರವಾಸೋದ್ಯಮ ದಿನಾಚರಣೆ: ಹೋಟೆಲ್- ರೆಸ್ಟೋರೆಂಟ್‌ಗಳಿಗೆ ಸಲಹೆ ನೀಡಿದ ಪ್ರವಾಸೋದ್ಯಮ ಇಲಾಖೆ

ಉಡುಪಿ: ಜಿಲ್ಲೆಯಲ್ಲಿ ಸೆಪ್ಟಂಬರ್ 27 ರಂದು ಟೂರಿಸಂ ಎಂಡ್ ಗ್ರೀನ್ ಇನ್ವೆಸ್ಟ್ಮೆಂಟ್ (ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು) ಎಂಬ ಸಂದೇಶದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ, ಜಿಲ್ಲೆಗಳಲ್ಲಿನ ಹೋಟೆಲ್, ರೆಸಾರ್ಟ್ ಮತ್ತು ಹೋಮ್‌ಸ್ಟೇ ಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸ್ವಚ್ಛತೆ, ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ನೈರ್ಮಲ್ಯ ಶುಚಿತ್ವದ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಇನ್ನಿತರೆ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಪ್ರಸ್ತುತಿ ಪಡಿಸಲು ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಈ ಕೆಳಕಂಡ […]

ವೃತ್ತಿಯಲ್ಲಿ ನಿಷ್ಠೆ- ಪ್ರಾಮಾಣಿಕತೆ ಇದ್ದಾಗ ಗೌರವ ಹೆಚ್ಚಾಗುವುದು: ಡಾ. ಹರೀಶ್ಚಂದ್ರ

ಉಡುಪಿ: ವೃತ್ತಿಯನ್ನು ಪ್ರೀತಿಸಿ, ನಿಷ್ಠೆಯಿಂದ ಮತ್ತು ಪ್ರಾಮಾಣಿಕತೆಯಿಂದ ತನ್ನನ್ನು ಸಮರ್ಪಿಸಿಕೊಂಡಾಗ ವೃತ್ತಿ ಗೌರವವೂ ಮತ್ತು ವ್ಯಕ್ತಿ ಗೌರವವೂ ಹೆಚ್ಚಾಗುತ್ತದೆ ಎಂದು ಗಾಂಧಿ ಆಸ್ಪತ್ರೆಯ ಎಮ್.ಡಿ ಡಾ. ಹರೀಶ್ಚಂದ್ರ ಅಭಿಪ್ರಾಯಪಟ್ಟರು. ಅವರು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೆಶನ್ ಉಡುಪಿ ವಲಯ ಹಮ್ಮಿಕೊಂಡಿದ್ದ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮತ್ತೋರ್ವ ಅತಿಥಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ಮಾತನಾಡಿ, ಪ್ರವಾಸೋದ್ಯಮಕ್ಕೂ ಛಾಯಾಚಿತ್ರಗ್ರಾಹಕರಿಗೂ ಅವಿನಾಭಾವ ಸಂಬಂಧವಿದೆ. ಛಾಯಾಗ್ರಹಣದ ಮೂಲಕ […]

ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಂತರಾಷ್ಟ್ರೀಯ ಭೂಪಟದಲ್ಲಿಡಲು ಬ್ಲಾಗರ್ಸ್ ಮೀಟ್ ಆಯೋಜಿಸಿದ ಜಿಲ್ಲಾಡಳಿತ

ಉಡುಪಿ: ಜಿಲ್ಲೆಯು ಪ್ರವಾಸಿ ತಾಣಗಳಿಗೆ ಪ್ರಸಿದ್ದಿ ಹೊಂದಿದ್ದು, ಇಲ್ಲಿನ ಬೀಚ್ ಮತ್ತು ದೇವಾಲಯಗಳಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇಲ್ಲಿನ ಎಲ್ಲಾ ಪ್ರವಾಸಿ ತಾಣಗಳ ಬಗ್ಗೆ ಜನರಿಗೆ ತಿಳಿಸಲು ಈ ಬಾರಿಯ ಪ್ರವಾಸೋದ್ಯಮ ದಿನಾಚಾರಣೆ ಸಂದರ್ಭದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಬ್ಲಾಗರ್ಸ್ ಮೀಟ್ ಆಯೋಜಿಸುವ ಮೂಲಕ ವಿಶಿಷ್ಟ ಕಾರ್ಯಕ್ರಮ ರೂಪಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ವಿಷಯಗಳು ಮತ್ತು ಯೋಜನೆಗಳ ಬಗ್ಗೆ ಪ್ರಚಾರ ನೀಡುವಲ್ಲಿ ಸಾಮಾಜಿಕ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜಿಲ್ಲೆಯ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಇದೇ […]

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಬೈಕ್ ರ‍್ಯಾಲಿಗೆ ಶಾಸಕ ರಘುಪತಿ ಭಟ್ ರಿಂದ ಚಾಲನೆ

ಉಡುಪಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ 2022 ಅಂಗವಾಗಿ ‘ಪ್ರವಾಸೋದ್ಯಮದ ಪುನರಾವಲೋಕನ’ ಎಂಬ ಸಂದೇಶದೊಂದಿಗೆ ಬೈಕ್ ರ‍್ಯಾಲಿಯನ್ನು ಆಯೋಜಿಸಲಾಯಿತು. ಮಂಗಳವಾರದಂದು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಬಳಿ ಆಯೋಜಿಸಲಾದ ಬೈಕ್ ರ‍್ಯಾಲಿಗೆ ಶಾಸಕ ರಘುಪತಿ ಭಟ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ […]