ವಿಶ್ವ ಯುವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲೆಯ ಯುವಕ-ಯುವತಿಯರಿಗೆ ಉಚಿತ ತರಬೇತಿ,ಉದ್ಯೋಗಾವಕಾಶ: ಪ್ರೇಮ್ ಪ್ರಸಾದ್ ಶೆಟ್ಟಿ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ಧಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯಲ್ಲಿ ಇಂದು “ವಿಶ್ವ ಯುವ ಕೌಶಲ್ಯ ದಿನ”ವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, “ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಭಾರತ ಹೊರಹೊಮ್ಮುತ್ತಿರುವ ಈ ಕಾಲಘಟ್ಟದಲ್ಲಿ ದೇಶದ ಯುವ ಶಕ್ತಿಯನ್ನು ಕೌಶಲ್ಯ ಭರಿತರನ್ನಾಗಿಸುವ ಸವಾಲು ನಮ್ಮೆಲ್ಲರ ಮೇಲಿದೆ. ಇಲ್ಲದೇ ಹೋದಲ್ಲಿ ಈ ಯುವ ಶಕ್ತಿಯು ನಿರುದ್ಯೋಗ, ಅಸಾಮಾಜಿಕ ಕೃತ್ಯಗಳಿಗೆ ಬಲಿಯಾಗುವ […]