ಮಾಜಿ ಸಚಿವ ಪ್ರಮೋದ್ ಮೀನುಗಾರರಿಗೆ ದ್ರೋಹ ಮಾಡಿದ್ದಾರೆ: ಯಶ್ ಪಾಲ್ ಸುವರ್ಣ ಆರೋಪ

ಉಡುಪಿ: ಮೈತ್ರಿ ಅಭ್ಯರ್ಥಿಯಾಗಿರುವ ಪ್ರಮೋದ್ ಮಧ್ವರಾಜ್ ಅವರು ಹಿಂದೆ ಮೀನುಗಾರ ಸಚಿವರಾಗಿದ್ದ ಸಂದರ್ಭದಲ್ಲಿ ಅವರ ಮೇಲೆ ಮೀನುಗಾರರ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಮೀನುಗಾರರಿಗೆ ಸೌಲಭ್ಯಗಳನ್ನು ನೀಡುವ ಬದಲು ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಜಾರಿಗೊಳಿಸಿದ್ದ ಯೋಜನೆಗಳನ್ನು ಮೀನುಗಾರರಿಂದ ಕಿತ್ತುಕೊಂಡರು. ಮೀನುಗಾರರ ಒಂದೇ ಒಂದು ಬೇಡಿಕೆಯನ್ನು ಈಡೇರಿಸದೆ ಮೀನುಗಾರರಿಗೆ ದ್ರೋಹ ಮಾಡಿದ್ದಾರೆ ಎಂದು ಉಡುಪಿ–ದ.ಕ. ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಆರೋಪಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ […]
ದ.ಕ–ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್: ನೂತನ ಅಧ್ಯಕ್ಷರಾಗಿ ‘ಯಶ್ಪಾಲ್ ಸುವರ್ಣ’ ಪುನರಾಯ್ಕೆ

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನೂತನ ಅಧ್ಯಕ್ಷರಾಗಿ ಸತತ 4ನೇ ಅವಧಿಗೆ ಯಶ್ಪಾಲ್ ಎ. ಸುವರ್ಣ ಅವರು ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪುರುಷೋತ್ತಮ್ ಅಮೀನ್ ಉಳ್ಳಾಲ ಅವರು ಪುನರಾಯ್ಕೆಯಾಗಿದ್ದಾರೆ. ಬುಧವಾರ ನಡೆದ ಫೆಡರೇಶನ್ನ ಆಡಳಿತ ಮಂಡಳಿಯ ಸಭೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಮಂಗಳೂರಿನ ಲೆಕ್ಕಪರಿಶೋಧನಾ ಉಪನಿರ್ದೇಶಕ ಮಹೇಶ್ವರಪ್ಪ ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಯಶ್ಪಾಲ್ ಸುವರ್ಣ ಅವರು 2009ರಲ್ಲಿ ಫೆಡರೇಶ್ನ ಅಧ್ಯಕ್ಷತೆಯನ್ನು ವಹಿಸಿಕೊಂಡ ಬಳಿಕ ಫೆಡರೇಶನಿನ ಪ್ರಮುಖ ವ್ಯವಹಾರಗಳಾದ ಸಿಗಡಿ ಮಾರಾಟ, ಡೀಸಿಲ್ […]