ಜ.12 ರ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿ: ಕುಯಿಲಾಡಿ

ಉಡುಪಿ: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದರವರ ಜನ್ಮ ದಿನ ಜನವರಿ12. ಅಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. […]