ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಯಾಗಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಆಯ್ಕೆ

ಉಡುಪಿ: ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಯಾಗಿದ್ದ ತಾಜುಲ್ ಫಖಹಾಅ ಬೇಕಲ್ ಉಸ್ತಾದರ ವಿಯೋಗದಿಂದ ತೆರವಾದ ಸ್ಥಾನಕ್ಕೆ ನೂತನ ಖಾಝಿಯಾಗಿ ಕರ್ನಾಟಕ ಸುನ್ನೀ ಉಲಮಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕನ್ನಡ ನಾಡಿನ ಖ್ಯಾತ ವಿದ್ವಾಂಸ ಝೈನುಲ್ ಉಲಮಾ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ಅವರನ್ನು ನೇಮಿಸಲಾಗಿದೆ. ಸಂಯುಕ್ತ ಜಮಾಅತ್ ಸರ್ವಸದಸ್ಯರ ಸಮ್ಮುಖದಲ್ಲಿ ತೆಗೆದುಕೊಂಡ ಸರ್ವಾನುಮತ ಈ ತೀರ್ಮಾನವನ್ನು ಉಡುಪಿಯ ಮಣಿಪಾಲ ಇನ್ ಹೊಟೇಲಿನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಜಮಾಅತ್ ನಿರ್ದೇಶಕ ಯು.ಕೆ. ಮುಸ್ತ […]