ಜಿಲ್ಲೆಯಲ್ಲಿ ವರದಕ್ಷಿಣೆ ಪ್ರಕರಣ ಇಳಿಕೆ: ಸಿ.ಇ.ಓ ಪ್ರಸನ್ನ ಹೆಚ್

ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 4 ವರದಕ್ಷಿಣೆ ಪ್ರಕರಣಗಳಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹೆಚ್ ತಿಳಿಸಿದರು. ಅವರು ಸೋಮವಾರದಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ತಮ್ಮ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಲು ತರಬೇತಿ ನೀಡಿ ಅವರನ್ನುಆರ್ಥಿಕವಾಗಿ ಸಬಲರನ್ನಾಗಿಸಬೇಕು. ಸರ್ಕಾರ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನೇಕ […]
ಸಿಇಟಿ ಪರೀಕ್ಷೆ ಆರಂಭ; ಜಿಲ್ಲೆಯಲ್ಲಿ ಸಕಲ ಸಿದ್ದತೆ ಪೂರ್ಣ: ಜಿ.ಪಂ ಸಿಇಒ

ಉಡುಪಿ: ರಾಜ್ಯದಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು ಮೇ 20 ಮತ್ತು 21 ರಂದು ನಡೆಯಲಿರುವ ಪರೀಕ್ಷೆಗಾಗಿ ಉಡುಪಿ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಲಾಗಿದೆ. ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡಲಾಗಿದೆ. ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ […]
ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು ಬಸವಣ್ಣ: ಪ್ರಸನ್ನ ಹೆಚ್

ಉಡುಪಿ: ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪವನ್ನು ರಚಿಸುವ ಮೂಲಕ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ತ ವಾತಾವರಣವನ್ನು ಕಲ್ಪಿಸಿದ ಬಸವಣ್ಣನವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಭಾನುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಬಸವ ಜಯಂತಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ತಾವು ಈ ಹಿಂದೆ ಬಸವಕಲ್ಯಾಣದಲ್ಲಿ […]
ಅನಿವಾಸಿ ಭಾರತೀಯ ಮತದಾರರನ್ನು ಸೆಳೆಯಲು ಸ್ವೀಪ್ ನಿಂದ ವಿನೂತನ ಪ್ರಯತ್ನ

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರಿಗೆ ಜಾಗೃತಿ ಮತ್ತು ಮತದಾನದ ಮಹತ್ವ ಕುರಿತು ಅರಿವು ಮೂಡಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿಯು, ಕಳೆದ ಬಾರಿಗಿಂತ ಹೆಚ್ಚಿನ ಮತದಾನ ನಡೆಸಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ವಿದೇಶದಲ್ಲಿ ಮತ್ತು ಹೊರರಾಜ್ಯದಲ್ಲಿ ನೆಲೆಸಿರುವ ಜಿಲ್ಲೆಯ ಮತದಾರರನ್ನು ಮತಗಟ್ಟೆಗೆ ಬರುವಂತೆ ಮಾಡಲು ವಿನೂತನ ಪ್ರಯತ್ನ ಮಾಡುತ್ತಿದೆ. ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕಾರಣಗಳಿಂದ ವಿದೇಶಗಳಿಗೆ ಮತ್ತು ಹೊರರಾಜ್ಯಗಳಿಗೆ ತೆರಳಿದ್ದು, ಇಲ್ಲಿಯೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. […]
ಮಾರ್ಚ್ 5 ರಂದು ಕಾಪುವಿನಲ್ಲಿ ಫಲಾನುಭವಿ ಸವಲತ್ತು ವಿತರಣೆಯ ಬೃಹತ್ ಸಮ್ಮೇಳನ: ಎಸ್.ಅಂಗಾರ

ಉಡುಪಿ : ಜಿಲ್ಲೆಯಲ್ಲಿ ಸರಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ನೇರವಾಗಿ ವಿತರಿಸಲು ಜಿಲ್ಲಾ ಮಟ್ಟದ ಫಲಾನುಭವಿಗಳ ಬೃಹತ್ ಸಮ್ಮೇಳನವನ್ನು ಮಾರ್ಚ್ 5 ರಂದು ಕಾಪು ಕ್ಷೇತ್ರದಲ್ಲಿ ಆಯೋಜಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ […]