ಪಿಂಚಣಿ ಸಪ್ತಾಹ ಸಮಾರೋಪ ಸಮಾರಂಭ

ಉಡುಪಿ: ಕಾರ್ಮಿಕ ಇಲಾಖೆ ಉಡುಪಿ, ಗ್ರಾಮ ವಿಕಾಸ ಸಮಿತಿ ಹಾಗೂ ಶ್ರೀ ರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಹೆಬ್ರಿ, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ರವಿವಾರ ಹೆಬ್ರಿಯ ಶ್ರೀರಾಮ ಮಂದಿರದಲ್ಲಿ ಪಿಂಚಣಿ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ನೋಂದಣಿ ಶಿಬಿರ ನಡೆಯಿತು.

ಕಾರ್ಮಿಕ ಅಧಿಕಾರಿ ಕುಮಾರ್ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್- ಧನ್ ಯೋಜನೆಯು ಮಾಹಿತಿ ನೀಡಿ, ಎಲ್ಲಾ ಅಸಂಘಟಿತ ಕಾರ್ಮಿಕರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಡಾ. ಭಾರ್ಗವಿ, ಉದ್ಯಮಿಗಳಾದ ಗುರುದಾಸ್ ಶಣೈ ಮತ್ತು ಯೋಗಿಶ್ ಭಟ್, ಹೆಬ್ರಿ ಗ್ರಾಮ ಪಂಚಾಯತ್ ಸದಸ್ಯ ಉದಯ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.