ಹಿಂದೂ ಸಂಘಟನೆಯ ಮುಖಂಡನಾಗಿದ್ದ ಉದ್ಯಮಿಯ ಬರ್ಬರ ಹತ್ಯೆ

ಬೆಳ್ತಂಗಡಿ: ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಉದ್ಯಮಿಯೊಬ್ಬರನ್ನು
ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆಗೈದ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಮುಂಡಗೋಡದ ಬಡ್ಡಿಗೇರಿಯಲ್ಲಿ ಎಂಬಲ್ಲಿ‌ ಇಂದು ಸಂಜೆ ನಡೆದಿದೆ.

ಮೃತ ಉದ್ಯಮಿಯನ್ನು ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆದ್ರಾಳ ನಿವಾಸಿ ಸುದರ್ಶನ್ ಯಾನೆ ಹರ್ಷ ರಾಣೆ (36) ಎಂದು ಗುರುತಿಸಲಾಗಿದೆ. ಇವರು ಇಂದು ಸಂಜೆ ಶಿರಸಿಯ ಮುಂಡಗೋಡದ ಬಡ್ಡಿಗೇರಿಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಈ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದರ್ಶನ್ ಗೆ ಮದುವೆಯಾಗಿ ಒಂದು ಮಗು ಇದೆ. ಅವರು ಮೂರು ವರ್ಷಗಳಿಂದ ಕುಟುಂಬ ಸಮೇತ ಧಾರವಾಡದಲ್ಲಿ ವಾಸವಾಗಿದ್ದರು. ಇವರಿಗೆ ಮಂಗಳೂರು , ಶಿರಸಿ ಸೇರಿದಂತೆ ಹಲವೆಡೆ ವ್ಯವಹಾರಗಳಿವೆ. ಸುದರ್ಶನ್ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.