ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ: ಏಳು ವರ್ಷ ಜೈಲು, ₹5 ಲಕ್ಷ ದಂಡ

ಬೆಂಗಳೂರು: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಇಂದು ನಡೆದ ವಿಧಾನಸಭೆಯ ಕಲಾಪದಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ ಮಾಡಲಾಯಿತು.

ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಿದರು. ಮಸೂದೆ ಮಂಡನೆಗೂ ಮುನ್ನ ವಿಧಾನಸೌಧದ ಪೂರ್ವ ದ್ವಾರದಲ್ಲಿ ಸಚಿವರಿಂದ ಗೋ ಪೂಜೆ ನಡೆಯಿತು.

ಗೋ ಹತ್ಯೆ ವಿಷೇಧ ವಿಧೇಯಕ ಮಂಡನೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಹಸು, ಕರು, ಎತ್ತು, ಎಮ್ಮೆ, ಕೋಣವನ್ನು ವಧೆ ಮಾಡುವುದಕ್ಕೆ ರಾಜ್ಯದಲ್ಲಿ ನಿಷೇಧ ವಿಧಿಸಲಾಗಿದೆ. ತಪ್ಪಿತಸ್ಥರಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ‌ ₹5 ಲಕ್ಷ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

.