ನಾಳೆ (ನ‌.9) ಬೆಳಗ್ಗೆ ಅಯೋಧ್ಯೆ ತೀರ್ಪು ಪ್ರಕಟ

ನವದೆಹಲಿ: ಹಲವು ವರ್ಷಗಳಿಂದ ಇಡೀ ಭಾರತ ದೇಶವೇ ಕಾಯುತ್ತಿರುವ ಅಯೋಧ್ಯೆಯ ತೀರ್ಪು ಶನಿವಾರ (ನ.9)ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ.
ಸುಪ್ರೀಂ‌ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನ.17 ರಂದು ನಿವೃತ್ತಿ ಆಗಲಿರುವ ಹಿನ್ನೆಲೆಯಲ್ಲಿ ತೀರ್ಪು ಶೀಘ್ರ ಪ್ರಕಟವಾಗುವ ನಿರೀಕ್ಷೆ ಇತ್ತು.
ಹೀಗಾಗಿ ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅ.16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು.
ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದವನ್ನು ಪರಿಹಾರಿಸಿಕೊಳ್ಳಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಫ್‍ಎಂಐ ಕಲಿಫುಲ್ಲಾ, ಧರ್ಮಗುರು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ ಹಾಗೂ ಹಿರಿಯ ವಕೀಲ ಶ್ರೀರಾಮ್ ಮಂಚು ಅವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು.
ಆದರೆ ಈ ವಿವಾದವನ್ನು ಬಗೆಹರಿಸಲು ಸಮಿತಿ ವಿಫಲವಾದ ಹಿನ್ನೆಲೆಯಲ್ಲಿ ಸಂವಿಧಾನ ಪೀಠ ದಿನನಿತ್ಯ ವಿಚಾರಣೆ ನಡೆಸಿತ್ತು.