ಡ್ರಗ್ಸ್ ದಂಧೆಯಲ್ಲಿ ರಾಜಕಾರಣಿಗಳು ಇದ್ದರೂ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ: ಕೃಷ್ಣಭೈರೇಗೌಡ

ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಯಾರೇ ಇದ್ದರೂ ರಕ್ಷಣೆ ಮಾಡಬಾರದು. ರಾಜಕಾರಣಿಗಳು ಅಥವಾ ಅವರ ಪುತ್ರರು ಇದ್ದರೂ ಕೂಡ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.

ಕೋಲಾರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು. ತನಿಖೆ, ಸಾಕ್ಷ್ಯಧಾರ ರಹಿತವಾಗಿ ಯಾರ ಮೇಲೂ ಆರೋಪ ಹೊರೆಸಬಾರದು. ಯಾವುದೇ ವ್ಯಕ್ತಿಯ ಸಾಮಾಜಿಕ ಜೀವನ ಹಾಳುಮಾಡಬಾರದು. ಊಹಾಪೋಹಾದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.