ಶಾಲಾ ಮಕ್ಕಳ ಪ್ರವಾಸದ ಬಸ್ ಪಲ್ಟಿ: ಇಬ್ಬರು ವಿದ್ಯಾರ್ಥಿ; ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ

ಕಾರ್ಕಳ: ರಾಜ್ಯ ಹೆದ್ದಾರಿಯ ಪಾಜೆಗುಡ್ಡ ತಿರುವಿನಲ್ಲಿ ಶಾಲಾ ಮಕ್ಕಳ ಪ್ರವಾಸದ ಬಸ್‌ ಪಲ್ಟಿ ಹೊಡೆದ ಘಟನೆ ವರದಿಯಾಗಿದೆ. ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಇಂದು ಈ ಘಟನೆ ನಡೆದಿದ್ದು, ಬಸ್‌ನಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಪ್ರೌಢಶಾಲೆಯೊಂದರ ವಿದ್ಯಾರ್ಥಿಗಳಿದ್ದರು. ಇಲ್ಲಿನ ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳ ಬಸ್ ಶಾಲಾ ಪ್ರವಾಸ ನಿಮಿತ್ತ ಈ ಹೆದ್ದಾರಿಯಲ್ಲಿ ಸಾಗುತ್ತಿತ್ತು. ದುರಾದೃಷ್ಟವಶಾತ್ ಮಕ್ಕಳ ಬಸ್‌ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ.

ವರದಿಗಳ ಪ್ರಕಾರ ಘಟನೆಯಲ್ಲಿ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಪ್ರಮಾಣದ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರು ವಿದ್ಯಾರ್ಥಿಗಳಿಗೆ ಗಂಭೀರಗಾಯಗಳಾಗಿವೆ. ಸಣ್ಣಪುಟ್ಟ ಗಾಯಗೊಂಡ ವಿದ್ಯಾರ್ಥಿಗಳನ್ನು ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಕರೆದೊಯ್ದು ಶುಶ್ರೂಷೆ ಮಾಡಲಾಗುತ್ತಿದೆ ಎನ್ನಲಾಗಿದೆ.