ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಾಂಪ್ರದಾಯಿಕ ದಿನಾಚರಣೆ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಾಂಪ್ರದಾಯಿಕ ದಿನವನ್ನು ಆಚರಿಸಲಾಯಿತು. ಸದಾಕಾಲ ಶಿಸ್ತಿನಿಂದ ಸಮವಸ್ತ್ರವನ್ನು ಧರಿಸುತ್ತಿದ್ದ ವಿದ್ಯಾರ್ಥಿಗಳು ಸಾಂಪ್ರದಾಯಿಕ ದಿನದಂದು ವಿವಿಧ ಬಗೆಯ ಉಡುಗೆಗಳಿಂದ ಕಂಗೊಳಿಸಿದರು.

ವಿದ್ಯಾರ್ಥಿನಿಯರು ಸೀರೆ, ಲಂಗ ದಾವಣಿ ತೊಟ್ಟಿದ್ದರೆ ವಿದ್ಯಾರ್ಥಿಗಳು ಬಿಳಿ ಪಂಚೆ, ಶರ್ಟು ,ಕುರ್ತಾ ಹೆಗಲ ಮೇಲೊಂದು ಶಾಲು ಧರಿಸಿ ಸಂಭ್ರಮದಿಂದ ಓಡಾಡುತ್ತಾ ಗಮನ ಸೆಳೆದರು. ಹಲವು ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ವಿದ್ಯಾರ್ಥಿಗಳು ತರಗತಿಯನ್ನು ವಿವಿಧ ಆಚರಣೆಯನ್ನು ಪ್ರತಿನಿಧಿಸುವ ರೀತಿಯಲ್ಲಿ ಸಂಭ್ರಮದಿಂದ ಅಲಂಕರಿಸಿ ಹಾಗೂ ಪ್ರಾಚ್ಯ ವಸ್ತುಗಳ ಪ್ರದರ್ಶನ ಹಾಗೂ ಹಬ್ಬದ ವಾತಾವರಣವನ್ನು ನಿರ್ಮಿಸಿ, ವಿವಿಧ ಸಂಸ್ಕೃತಿ ಕಲೆ ಸಂಪ್ರದಾಯ ಕುರಿತಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದಯ ನಾಯ್ಕ ಕನ್ನಡ ವಿಭಾಗ ಮುಖ್ಯಸ್ಥರು ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರು ವಿದ್ಯಾರ್ಥಿಗಳಿಗೆ ಜೀವನ ಮೌಲ್ಯದ ಕುರಿತಾಗಿ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಬ್ರಮಣ್ಯ ಇವರು ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಂಸ್ಕೃತಿ ಉಳಿಸಿ ಬೆಳೆಸುವ ಕುರಿತಾಗಿ ಮಾಹಿತಿ ನೀಡಿದರು.

ಸಂಸ್ಥೆಯ ನಿರ್ದೇಶಕಿ ಮಮತಾ, ಉಪಪ್ರಾಂಶುಪಾಲೆ ಸುಜಾತಾ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ರಝಿಕಾ ಉಪಸ್ಥಿತರಿದ್ದರು .

ಕನ್ನಡ ವಿಭಾಗದ ಉಪನ್ಯಾಸಕಿ ಅನುಪಮಾ ಭಟ್ ಸಾಂಪ್ರದಾಯಿಕ ದಿನದ ಮಹತ್ವದ ಕುರಿತಾಗಿ ಮಾತನಾಡಿದರು.

ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಸನ್ನಿಧಿ ಜೋಗಿ ಸ್ವಾಗತಿಸಿ, ಪ್ರಿಯಾಂಕ ಶೆಟ್ಟಿ ವಂದಿಸಿ ,ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ವಾತಿ ನಿರೂಪಿಸಿದರು.