ಬೈಕ್, ಕಾರಿನ ಮೇಲೆ ಉರುಳಿದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರರು

ಉಡುಪಿ: ನಗರದ ಬ್ರಹ್ಮಗಿರಿ ಜಂಕ್ಷನ್ ನಲ್ಲಿ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರವೊಂದು ಇಂದು ಮಧ್ಯಾಹ್ನ ಉರುಳಿಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಕಾರು ಮತ್ತು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬ್ರಹ್ಮಗಿರಿ ಅಂಬಲಪಾಡಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸ್ಥಳಕ್ಕೆ ಆಗಮಿಸಿರುವ ನಗರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.