ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ವೃಕ್ಷಾರೋಹಣ ಕಾರ್ಯಕ್ರಮ

ಉಡುಪಿ: ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಇಂದ್ರಾಳಿ ರೈಲ್ವೆ ಸ್ಟೇಷನ್ ನ ಬಳಿ ಬುಧವಾರ ವೃಕ್ಷಾರೋಹಣ ಕಾರ್ಯಕ್ರಮ ಆಯೋಜಿಸಲಾಯಿತು.

ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ.

ರೈಲ್ವೆ ಇಂಜಿನಿಯರ್ ವೆಂಕಟೇಶ್, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಜಲ, ಸುಧಾ ಪೈ, ಪೂರ್ಣಿಮ ರತ್ನಾಕರ, ಮಾಯಾ ಕಾಮತ್, ದಯಶಿನಿ, ರಶ್ಮಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್, ಅಲ್ವಿನ್ ಡಿಸೋಜ, ಬೂತ್ ಅಧ್ಯಕ್ಷ ಲೋಕಯ್ಯ ಮೊದಲಾದವರು ಉಪಸ್ಥಿತರಿದ್ದರು.