ಪರಿಷ್ಕೃತ ಕೆ-ಸಿಇಟಿ ಫಲಿತಾಂಶ: ಜ್ಞಾನಸುಧಾ ಕಾಲೇಜಿಗೆ ಎರಡು ರ‍್ಯಾಂಕ್

ಕಾರ್ಕಳ : ಇತ್ತೀಚೆಗೆ ಹೊರಡಿಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ತಾಂತ್ರಿಕ ದೋಷದಿಂದ ಕೆಲ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿತ್ತು. ಆ ಪರಿಷೃತ ಫಲಿತಾಂಶವು ಪ್ರಕಟಗೊಂಡಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಿಶಾಂತ್ ಎನ್ ಹೆಗ್ಡೆ 1072(G55) ನೇ ರ‍್ಯಾಂಕ್ ಹಾಗೂ ಸಾತ್ವಿಕ್ ಬಿ.ಸಿ 1387(G55) ನೇ ರ‍್ಯಾಂಕ್ ಪಡೆಯುವುದರ ಮೂಲಕ ಜ್ಞಾನಸುಧಾದ 2 ಸಾವಿರದೊಳಗಿನ ರ‍್ಯಾಂಕ್‌ಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

ಜೊತೆಗೆ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೆ-ಸಿಇಟಿ ಇಂಜಿನಯರಿಂಗ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್ ಬಂದಿರುವುದು ಹಾಗೂ ಪ್ರಣವ್ ಗುಜ್ಜರ್ ಕೃಷಿ ವಿಭಾಗದಲ್ಲಿ 6ನೇ ರ‍್ಯಾಂಕ್ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ 68ನೇ ರ‍್ಯಾಂಕ್ ಗಳಿಸಿರುವುದನ್ನು ಸ್ಮರಿಸಿಕೊಳ್ಳಬಹುದಾಗಿದೆ.