ಕಂಬದಕೋಣೆ ಬಳಿ ಬೈಕ್ ಅಪಘಾತ: ಆಂಧ್ರ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತ್ಯುವಶ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಂಬದಕೋಣೆ ಬಳಿಯ ಸೇತುವೆ ಸಮೀಪ ಬೈಕ್ ಸ್ಕಿಡ್ ಆಗಿದ್ದು, ಸವಾರರಿಬ್ಬರು ಸಾವನ್ನಪ್ಪಿದ ದುರ್ಘಟನೆ ಭಾನುವಾರ ಸಂಭವಿಸಿದೆ.

ಆಂಧ್ರಪ್ರದೇಶದ ಆದಿತ್ಯ ರೆಡ್ಡಿ(18) ಮತ್ತು ತರುಣ್ ಕುಮಾರ್ ರೆಡ್ಡಿ( 19) ಸಾವನಪ್ಪಿದವರು. ಇವರಿಬ್ಬರೂ ಉಡುಪಿಯ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳಾಗಿದ್ದಾರೆ.

ಸವಾರರು ಕುಂದಾಪುರ ಕಡೆಯಿಂದ ಬೈಂದೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸುದ್ದಿ ತಿಳಿದ ತಕ್ಷಣ ಗಂಗೊಳ್ಳಿಯ 24*7 ಆಪತ್ಭಾಂಧವ ಆಂಬ್ಯುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಪ್ರದೀಪ್ ಖಾರ್ವಿ ಉಪ್ಪುಂದ, ಚಾಲಕ ಕೃಷ್ಣ ಹಾಗೂ ನದೀಂ ಸಹಕಾರದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.