ಚೆಂಬುಗುಡ್ಡೆ ಮಸೀದಿ ಆವರಣದಲ್ಲಿ ಆರೋಗ್ಯ ತಪಾಸಣೆಗೆ ಒಳಪಡುವಂತೆ ಮಾಜಿ ಸಚಿವ ಯು.ಟಿ ಖಾದರ್ ಮನವಿ

ಮಂಗಳೂರು: ವಾರದ ಹಿಂದೆ ಮಂಗಳೂರಿನ ಹೊರ ವಲಯದ ತೊಕ್ಕೊಟ್ಟು ಮೂಲದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯ ನಾಗರಿಕರು ಇಲ್ಲಿನ ಚೆಂಬುಗುಡ್ಡೆ ಮಸೀದಿ ಆವರಣದಲ್ಲಿ ಆರೋಗ್ಯ ತಪಾಸಣೆಗೆ ಒಳಪಡುವಂತೆ ಮಾಜಿ ಸಚಿವ ಯು.ಟಿ ಖಾದರ್ ಮಸೀದಿ ಮೈಕ್ ನಲ್ಲಿ ಇಂದು ಮನವಿ ಮಾಡಿದರು.

ಸೋಂಕು ದೃಡಪಟ್ಟ ತೊಕ್ಕೊಟ್ಟು ಮೂಲದ‌ ವ್ಯಕ್ತಿ ವ್ಯಕ್ತಿ ಇಲ್ಲಿನ ಚೆಂಬುಗುಡ್ಡೆ ಮಸೀದಿಗೆ ಹಲವು ಬಾರಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಂಡ ಮಸೀದಿ ಆವರಣದಲ್ಲಿ ಆರೋಗ್ಯ ತಪಾಸಣೆಗೆ ನಡೆಸುತ್ತಿದ್ದು, ಖಾದರ್ ಕೂಡ ಸ್ವತಃ ತಪಾಸಣೆಗೆ ಒಳಗಾಗಿ ಇತರ ಮುಸ್ಲಿಂ ಭಾಂಧವರು‌ ಮತ್ತು ನಾಗರಿಕರು ಮಸೀದಿ ಆವರಣದಲ್ಲಿ ಆರೋಗ್ಯ ತಪಾಸಣೆಗೆ ಮಾಡಿಸಿ, ಆರೋಗ್ಯ ಇಲಾಖೆ ತಂಡದ ಜೊತೆ ಸಹಕರಿಸಿ ಅಂತ ಮಸೀದಿ ಮೈಕ್ ನಲ್ಲಿ ಮನವಿ ಮಾಡಿಕೊಂಡರು.. ಇನ್ನೂ ಖಾದರ್ ಮನವಿ ಹಿನ್ನೆಲೆ ಸ್ವಯಂ ಪ್ರೇರಿತವಾಗಿ ಆಗಮಿಸಿದ ನಾಗರಿಕರು ಆರೋಗ್ಯ ತಪಾಸಣೆಗೆ ಮಾಡಿಸಿಕೊಂಡರು.