ಉಡುಪಿ: ಮುಂಬೈನಿಂದ ಬಂದ 121 ಮಂದಿಗೆ ಕೊರೊನಾ ಪಾಸಿಟಿವ್: 101 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿ: ಮುಂಬೈನಿಂದ ಉಡುಪಿಗೆ ಜಿಲ್ಲೆಗೆ ಬಂದಿರುವ 121 ಮಂದಿಯಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಓರ್ವ ಸೋಂಕಿತ ದಕ್ಷಿಣ ಕನ್ನಡ ಜಿಲ್ಲೆಯವನಾಗಿದ್ದಾನೆ. ಸೋಂಕಿತರಿಗೆ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಮಾಹಿತಿ ನೀಡಿದರು.
121 ಸೋಂಕಿತರಲ್ಲಿ 71 ಪುರುಷರು, 34 ಮಹಿಳೆಯರು ಹಾಗೂ 16 ಮಕ್ಕಳು ಇದ್ದಾರೆ ಎಂದು ಹೇಳಿದರು.
101 ಮಂದಿ ಡಿಸ್ಚಾರ್ಜ್:
ಜಿಲ್ಲೆಯಲ್ಲಿ ಇಂದು 101 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಉಳಿದಂತೆ ಜಿಲ್ಲೆಯಲ್ಲಿರುವ ಸೋಂಕಿತರ ಪೈಕಿ ಯಾರು ಗಂಭೀರ ಸ್ಥಿತಿಯಲ್ಲಿಲ್ಲ. ಯಾರು ವೆಂಟಿಲೇಟರ್, ಆಕ್ಸಿಜನ್, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ. ಹಾಗಾಗಿ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.