ಅಶ್ವಥ ಎಲೆಯಲ್ಲಿ ಕೃಷ್ಣಾಪುರ ಶ್ರೀಗಳ ಕಲಾಕೃತಿ ರಚಿಸಿ ಪರ್ಯಾಯಕ್ಕೆ ಶುಭಕೋರಿದ ಉಡುಪಿಯ ಯುವ ಕಲಾವಿದ

ಅಶ್ವಥ ಎಲೆಯಲ್ಲಿ ಉಡುಪಿಯ ಯುವ ಕಲಾವಿದರೊಬ್ಬರು ಭಾವೀ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಕಲಾಕೃತಿ ರಚಿಸಿ ಪರ್ಯಾಯ ಮಹೋತ್ಸವಕ್ಕೆ ವಿಶಿಷ್ಟ ರೀತಿಯಲ್ಲಿ ಶುಭಕೋರಿದ್ದಾರೆ.

ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು exclusive ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆ ಗೊಂಡ ಉಡುಪಿಯ ಯುವ ಕಲಾವಿದ ಮಹೇಶ್ ಮರ್ಣೆ ಅವರು ಅಶ್ವಥ ಎಲೆಯಲ್ಲಿ ಶ್ರೀಗಳ ಕಲಾಕೃತಿ ರಚಿಸಿ ಗಮನ ಸೆಳೆದಿದ್ದಾರೆ.

ಮಹೇಶ್ ಅವರು ಈ ಹಿಂದೆಯೂ ಅನೇಕ ರಾಜಕೀಯ ನಾಯಕರು, ಸಾಧಕರು, ಸ್ವಾಮೀಜಿಗಳು ಹಾಗೂ ಗಣ್ಯ ವ್ಯಕ್ತಿಗಳ ಚಿತ್ರಗಳನ್ನು ಅಶ್ವಥ ಎಲೆಯಲ್ಲಿ ರಚಿಸಿ ವಿಶೇಷ ಸಾಧನೆ ಮಾಡಿದ್ದಾರೆ. ಇವರ ಈ ಸಾಧನೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.