ಉಡುಪಿ: ಆತ್ಮಹತ್ಯೆ ಮಾಡಿಕೊಂಡ ಅಭಿಷೇಕ್ ಆಚಾರ್ಯ ನನ್ನು ನಾಲ್ಕು ಮಂದಿಯ ತಂಡವೊಂದು ಹನಿಟ್ರ್ಯಾಪ್ ಬಲೆಗೆ ಬೀಳಿಸಿ, ಹಣ ನೀಡುವಂತೆ ಚಿತ್ರಹಿಂಸೆ ಕೊಟ್ಟಿದ್ದರು. ಆತನಿಂದ ಮೂರ್ನಾಲ್ಕು ಲಕ್ಷ ರೂ. ಗಳನ್ನು ಬಲವಂತವಾಗಿ ಕಿತ್ತುಕೊಂಡಿದ್ದರು. ಅಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ. ಈ ಚಿತ್ರಹಿಂಸೆ ತಾಳಲಾರದೆ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಶ್ವಕರ್ಮ ಯುವ ಮಿಲನ ಸ್ಥಾಪಕ ಅಧ್ಯಕ್ಷ ವಿಕ್ರಂ ಐ ಆಚಾರ್ಯ ಆಗ್ರಹಿಸಿದ್ದಾರೆ.
ನಿರೀಕ್ಷಾ, ರಾಕೇಶ್, ರಾಹುಲ್ ಹಾಗೂ ತಸ್ಲಿಂ ಈ ನಾಲ್ಕು ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ದು, ಇವರ ಮೇಲೆ ಪ್ರಕರಣ ಕೂಡ ದಾಖಲಾಗಿದೆ. ಆದರೆ ಪೊಲೀಸರು ಯಾವುದೇ ಕಠಿಣ ಕ್ರಮಕೈಗೊಂಡಿಲ್ಲ. ಈ ನಾಲ್ಕು ಮಂದಿ ಅಭಿಷೇಕ್ ನ ಅಶ್ಲೀಲ ಚಿತ್ರಗಳನ್ನು ಹಿಡನ್ ಕ್ಯಾಮರಾದಲ್ಲಿ ಸೆರೆ ಹಿಡಿದು, ಹಣಕ್ಕಾಗಿ ಬೆದರಿಕೆಯೊಡ್ಡಿದ್ದಾರೆ. ಹೀಗಾಗಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


















