ಉಡುಪಿ: ಇಂದಿರಾನಗರ ನಿವಾಸಿ ಆತ್ಮಹತ್ಯೆಗೆ ಶರಣು

ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಇಂದಿರಾ ನಗರದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಇಂದಿರಾನಗರದ 6ನೇ ಅಡ್ಡರಸ್ತೆಯ ನಿವಾಸಿ ಸ್ಟೀವನ್‌ ಪ್ರಭಾಕರ ಅಮ್ಮನ್ನ (49) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮರದ ಕೆತ್ತನೆ ಕೆಲಸ ಮಾಡಿಕೊಂಡಿದ್ದರು. ಆದರೆ ಇತ್ತೀಚೆಗೆ ಕೆಲಸವಿಲ್ಲದೆ ಮಾನಸಿಕ ಖಿನ್ನತೆ ಒಳಗಾಗಿದ್ದರು ಎನ್ನಲಾಗಿದೆ.

ಇದೇ ಕಾರಣದಿಂದ ಸ್ಟೀವನ್ ಪ್ರಭಾಕರ್ ಜೀವನದಲ್ಲಿ ಜಿಗುಪ್ಸೆಗೊಂಡು ಗುರುವಾರ ರಾತ್ರಿ 2ಗಂಟೆಯಿಂದ ಶುಕ್ರವಾರದ ಬೆಳಿಗ್ಗೆ 6 ಗಂಟೆಯ ಅವಧಿಯಲ್ಲಿ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.