ಶಾಸಕರಾದ ರಘುಪತಿ ಭಟ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದ ಚೌಕಿದಾರ್ ಸೈಕ್ಲೋತಾನ್ ಸೈಕಲ್ ಜಾಥಾ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಚಂಡ ಬಹುಮತದಿಂದ ಗೆಲ್ಲಿಸಿಕೊಡುವ ಸಲುಚಾಗಿ ಇಂದು ಉಡುಪಿಯಲ್ಲಿ ಶಾಸಕರಾದ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಉಡುಪಿ ಬಿಜೆಪಿ ಯುವಮೋರ್ಚಾ ವತಿಯಿಂದ “ಚೌಕಿದಾರ್ ಸೈಕ್ಲೋತಾನ್ ಸೈಕಲ್ ಜಾಥಾ”ವು ಯಶಸ್ವಿಯಾಗಿ ನಡೆಯಿತು. ಉಡುಪಿ ಮಲ್ಪೆಯಿಂದ ಆರಂಭಗೊಂಡು ತಾಲೂಕು ಕಚೇರಿಯಿಂದ ಬ್ರಹ್ಮಗಿರಿ- ಅಜ್ಜರಕಾಡು ಮೂಲಕ ಸಾಗಿ ಜಿಲ್ಲಾ ಬಿಜೆಪಿ ಕಚೇರಿ ಬಳಿ ಸಮಾಪಣಗೊಂಡಿತು.
ಕಾರ್ಯಕ್ರಮದಲ್ಲಿ ಶಾಸಕರ ಜೊತೆಗೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಸುವರ್ಣ ಕೂಡ ಜೊತೆಗಿದ್ದರು ಮತ್ತು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು, ಪದಾಧಿಕಾರಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಸೈಕಲ್ ಜಾಥಾ” ಅಭಿಯಾನದಲ್ಲಿ ೫೦೦ಕ್ಕೂ ಹೆಚ್ಚು ಮೋದಿ ಅಭಿಮಾನಿಗಳು ಸೈಕಲ್ ಮೂಲಕ ಭಾಗವಹಿಸಿದ್ದು, ಜಿಲ್ಲಾ ಬಿಜೆಪಿ ಪ್ರಮುಖರು ಕೂಡ ಭಾಗವಹಿಸಿದ್ದರು.
ಮಹೇಶ್ ಠಾಕೂರ್ ಅವರ ನೇತೃತ್ವದಲ್ಲಿ ನಡೆದ ಈ ಅಭಿಯಾನದಲ್ಲಿ ಶಾಸಕರಾದ ಕೆ ರಘುಪತಿ ಭಟ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಸುವರ್ಣ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಶ್ರೀಶ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ನಗರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ದಾವೂದ್ ಅಬೂಬಕರ್, ಯುವಮೋರ್ಚಾ ಪದಾಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರುವ ಭಾಗವಹಿಸಿದ್ದರು.