ಜೂ. 4ರಿಂದ ಉಡುಪಿ ನಗರದ ರಸ್ತೆ ಬದಿಯಲ್ಲಿ ತರಕಾರಿ ಹಣ್ಣುಹಂಪಲು ಮಾರಾಟ ನಿಷೇಧ

ಉಡುಪಿ ಜೂನ್ 2: ಉಡುಪಿ ನಗರದ ಎಲ್ಲಾ ರಸ್ತೆ ಬದಿ ವ್ಯಾಪಾರಿಗಳು ಮತ್ತು ರಸ್ತೆ ಬದಿ ವಾಹನಗಳಲ್ಲಿ ಹಣ್ಣು, ತರಕಾರಿ ಹಾಗೂ ರಖಂ (ಹೋಲ್ಸೇಲ್) ವ್ಯಾಪಾರಿಗಳು ಜೂನ್ 4 ರಿಂದ , ತಮ್ಮ ಎಲ್ಲಾ ವ್ಯಾಪಾರ, ವಹಿವಾಟುಗಳನ್ನು , ನಗರದ ಆದಿ ಉಡುಪಿ ಬಳಿ ಇರುವ ಎ.ಪಿಎಂ.ಸಿ ಮಾರುಕಟ್ಟೆಗೆ ಸ್ಥಳಾಂತರಿಸುವುದು.

ಯಾವುದೇ ತರಕಾರಿ, ಹಣ್ಣು ಹಂಪಲು ವ್ಯಾಪಾರಸ್ಥರು ಎ.ಪಿ.ಎಂ.ಸಿ ಮಾರುಕಟ್ಟೆಯ ಆವರಣವನ್ನು ಹೊರತುಪಡಿಸಿ, ನಗರದ ಯಾವುದೇ ಪ್ರದೇಶಗಳಲ್ಲಿ, ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ,  ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿಧಿಸಲಾಗುವುದು ಎಂದು ಪೌರಾಯುಕ್ತ ಆನಂದ ಸಿ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.