ಉಡುಪಿ:ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಿಂದ ಪುತ್ತಿಗೆ ಮಠದ ಸ್ವಾಮೀಜಿ ಭೇಟಿ

ಉಡುಪಿ:ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಅವರು ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರನ್ನು ಭೇಟಿ ಮಾಡಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಸೌಹಾರ್ದತೆ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕ್ರೈಸ್ತ ಅಭಿವೃದ್ದಿ
ನಿಗಮದ ನಿರ್ದೇಶಕರು ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಪ್ರಶಾಂತ್ ಜತ್ತನ್, ಗ್ಯಾರಂಟಿ ಯೋಜನೆ ಸದಸ್ಯರಾದ ಡಾ.
ಸಂತೋಷ್ ಕುಮಾರ್ ಬೈರಂಪಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.