ಉಡುಪಿಯಲ್ಲಿ ನಾಳೆಯಿಂದ ಬಸ್ ಸಂಚಾರ ಪುನರಾರಂಭ: ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ಕ್ರಮ: ಡಿಸಿ ಜಿ. ಜಗದೀಶ್

ಉಡುಪಿ: ಸಿಎಂ ಯಡಿಯೂರಪ್ಪನವರು ರಾಜ್ಯದಲ್ಲಿ ಇನ್ಮುಂದೆ ಲಾಕ್ ಡೌನ್ ಮಾಡಲ್ಲವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬುಧವಾರ (ಜುಲೈ 22)ದಿಂದ ಮತ್ತೆ ಬಸ್ ಸಂಚಾರ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಇಂದು ವಿಡಿಯೋ ಹೇಳಿಕೆ ಮೂಲಕ ಮಾಹಿತಿ ನೀಡಿದರು.
ಬಸ್ ಅನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಓಡಿಸಬೇಕು. ಪ್ರಯಾಣಿಕರು ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದ್ದಾರೆ.
ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಕಾರ್ಯನಿರ್ವಹಿಸಲಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ತುರ್ತು ಅವಶ್ಯಕತೆಗಳು ಇದ್ದಂತಹ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕರು ಹೊರಬರಬೇಕು. ಅನಾವಶ್ಯಕವಾಗಿ ಓಡಾಡಬಾರದು ಎಂದು ಡಿಸಿ ಸೂಚನೆ ನೀಡಿದ್ದಾರೆ.