ಉಡುಪಿ: ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ; ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಡೆಯುವುದು ಅವಶ್ಯವಕವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಅವಶ್ಯಕ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

ಈ ಸಂದರ್ಭದಲ್ಲಿ ಯಾವುದೇ ಮೈಕ್ರೋಫೈನಾನ್ಸ್ಗಳು/ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆಗೆ ಭೇಟಿ ನೀಡುವುದನ್ನು ಜೂನ್ 6 ರವರೆಗೆ ನಿರ್ಬಂಧಿಸಲಾಗಿದೆ.
ಯಾವುದೇ ಮೈಕ್ರೋಫೈನಾನ್ಸ್ಗಳು/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಾಲ ಮರು ಪಾವತಿ ಮಾಡಲು ಒತ್ತಡ ಹೇರುವಂತಿಲ್ಲ. ಅಲ್ಲದೇ ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲು ನೋಡೆಲ್ ಅಧಿಕಾರಿಗಳನ್ನಾಗಿ , ರುದ್ರೇಶ್ ಡಿ.ಸಿ , ಲೀಡ್ ಡಿಸ್ಟಿಕ್ಟ್ ಮ್ಯಾನೆಜರ್, 94498 60858, ಪ್ರವೀಣ್ ಬಿ. ನಾಯಕ್, ಸಹಕಾರ ಸಂಘಗಳ ಉಪನಿಬಂಧಕರು 94486 33338 ಅವರನ್ನು ನೇಮಿಸಲಾಗಿದೆ.

ಈ ನೋಡೆಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾದ ಸಾಲ ಮರುಪಾವತಿ ಕುರಿತು ದೂರುಗಳಿಗೆ ತಕ್ಷಣವೇ ಸ್ಪಂದಿಸುವುದು.  ಮೈಕ್ರೋ ಫೈನಾನ್ಸ್ಗಳು/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಹಾಗೂ ಸಾರ್ವಜನಿಕರ ಮಧ್ಯೆ ಸಮನ್ವಯತೆಯಿಂದ ಯಾವುದೇ ಗೊಂದಲ/ ಸಂಘರ್ಷ ಉಂಟಾಗದoತೆ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್  ತಿಳಿಸಿದ್ದಾರೆ.