ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೂರ್ಮಾ ರಾವ್ ಅವರಿಗೆ ಬೀಳ್ಕೊಡುಗೆ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಿರ್ಗಮನ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರನ್ನು ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೂರ್ಮಾರಾವ್ ಅವರ ತಾಳ್ಮೆ, ಕರ್ತವ್ಯ ನಿಷ್ಠೆ, ನಾಯಕತ್ವ ಗುಣವನ್ನು ಶ್ಲಾಘಿಸಿ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಪೂರ್ಣಿಮಾ, ಸಹಾಯಕ ನಿರ್ದೇಶಕಿ ಕನ್ನಡ ಸಂಸ್ಕೃತಿ ಇಲಾಖೆ, ನರಸಿಂಹ ಮೂರ್ತಿ ರಾವ್, ಭುವನಪ್ರಸಾದ ಹೆಗ್ಡೆ, ರಾಮಾಂಜಿ ಉಪಸ್ಥಿತರಿದ್ದರು.